ಸಿದ್ದಾಪುರ ಬಳಿ ರಸ್ತೆ ದಾಟುತ್ತಿರುವ ಕಾಡಾನೆ ಹಿಂಡು  
ರಾಜ್ಯ

ಸಿದ್ದಾಪುರ: ಕಾಡಾನೆ ದಾಳಿಯಲ್ಲಿ ಎಸ್ಟೇಟ್ ಮಾಲೀಕ, ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗೆ ಗಾಯ

ಎಂ ಪ್ರವೀಣ್ ಬೋಪಯ್ಯ ಮಾಲೀಕತ್ವದ ಖಾಸಗಿ ಎಸ್ಟೇಟ್‌ನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಎಚ್ಚೆತ್ತ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿತ್ತು.

ಮಡಿಕೇರಿ: ಆನೆಗಳನ್ನು ಓಡಿಸುವ ಕಾರ್ಯಾಚರಣೆಯ ಸಮಯದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ್ದು, ಎಸ್ಟೇಟ್ ಮಾಲೀಕ ಮತ್ತು ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.

ಸಿದ್ದಾಪುರ ಸಮೀಪದ ಎಂಜಿಲಗೇರಿ ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಎಂ ಪ್ರವೀಣ್ ಬೋಪಯ್ಯ ಮಾಲೀಕತ್ವದ ಖಾಸಗಿ ಎಸ್ಟೇಟ್‌ನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಎಚ್ಚೆತ್ತ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿತ್ತು.

ಈ ಕಾರ್ಯಾಚರಣೆ ವೇಳೆ ಆಕ್ರೋಶಗೊಂಡ ಕಾಡಾನೆಗಳ ಹಿಂಡಿನ ಆನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ. ಈ ವೇಳೆ ಅರಣ್ಯಾಧಿಕಾರಿಗಳಾದ ಮುರುಗನ್ ಮತ್ತು ವಿನೋದ್ ಮೇಲೆ ಆನೆ ದಾಳಿ ನಡೆಸಿದ್ದು, ಮುರುಗನ್ ಅವರ ಕಾಲುಗಳಿಗೆ ತೀವ್ರ ಪೆಟ್ಟಾಗಿದೆ. ಆನೆ ದಾಳಿ ತಡೆಯಲು ಯತ್ನಿಸಿದ ಎಸ್ಟೇಟ್ ಮಾಲೀಕ ಪ್ರವೀಣ್ ಅವರಿಗೂ ಗಾಯಗಳಾಗಿವೆ. ಸದ್ಯ ಮೂವರು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾನವರೊಂದಿಗೆ ಸಂಘರ್ಷಕ್ಕಿಳಿದಿರುವ ಕಾಡಾನೆಗಳನ್ನು ಅರಣ್ಯ ಇಲಾಖೆ ಹಿಡಿದು ಸ್ಥಳಾಂತರಿಸಬೇಕು ಎಂದು ಪ್ರವೀಣ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

SCROLL FOR NEXT