ಸಿದ್ದಾಪುರ ಬಳಿ ರಸ್ತೆ ದಾಟುತ್ತಿರುವ ಕಾಡಾನೆ ಹಿಂಡು  
ರಾಜ್ಯ

ಸಿದ್ದಾಪುರ: ಕಾಡಾನೆ ದಾಳಿಯಲ್ಲಿ ಎಸ್ಟೇಟ್ ಮಾಲೀಕ, ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗೆ ಗಾಯ

ಎಂ ಪ್ರವೀಣ್ ಬೋಪಯ್ಯ ಮಾಲೀಕತ್ವದ ಖಾಸಗಿ ಎಸ್ಟೇಟ್‌ನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಎಚ್ಚೆತ್ತ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿತ್ತು.

ಮಡಿಕೇರಿ: ಆನೆಗಳನ್ನು ಓಡಿಸುವ ಕಾರ್ಯಾಚರಣೆಯ ಸಮಯದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ್ದು, ಎಸ್ಟೇಟ್ ಮಾಲೀಕ ಮತ್ತು ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.

ಸಿದ್ದಾಪುರ ಸಮೀಪದ ಎಂಜಿಲಗೇರಿ ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಎಂ ಪ್ರವೀಣ್ ಬೋಪಯ್ಯ ಮಾಲೀಕತ್ವದ ಖಾಸಗಿ ಎಸ್ಟೇಟ್‌ನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಎಚ್ಚೆತ್ತ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿತ್ತು.

ಈ ಕಾರ್ಯಾಚರಣೆ ವೇಳೆ ಆಕ್ರೋಶಗೊಂಡ ಕಾಡಾನೆಗಳ ಹಿಂಡಿನ ಆನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ. ಈ ವೇಳೆ ಅರಣ್ಯಾಧಿಕಾರಿಗಳಾದ ಮುರುಗನ್ ಮತ್ತು ವಿನೋದ್ ಮೇಲೆ ಆನೆ ದಾಳಿ ನಡೆಸಿದ್ದು, ಮುರುಗನ್ ಅವರ ಕಾಲುಗಳಿಗೆ ತೀವ್ರ ಪೆಟ್ಟಾಗಿದೆ. ಆನೆ ದಾಳಿ ತಡೆಯಲು ಯತ್ನಿಸಿದ ಎಸ್ಟೇಟ್ ಮಾಲೀಕ ಪ್ರವೀಣ್ ಅವರಿಗೂ ಗಾಯಗಳಾಗಿವೆ. ಸದ್ಯ ಮೂವರು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾನವರೊಂದಿಗೆ ಸಂಘರ್ಷಕ್ಕಿಳಿದಿರುವ ಕಾಡಾನೆಗಳನ್ನು ಅರಣ್ಯ ಇಲಾಖೆ ಹಿಡಿದು ಸ್ಥಳಾಂತರಿಸಬೇಕು ಎಂದು ಪ್ರವೀಣ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT