ಟ್ರ್ಯಾಕ್ಟರ್​‌ಗೆ ಬೆಂಕಿ; ಹರಿಬಾಬು ಮತ್ತು ರಂಗನಾಥ  
ರಾಜ್ಯ

ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು, ಟ್ರ್ಯಾಕ್ಟರ್​‌ಗೆ ಬೆಂಕಿ

ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ಪಲ್ಲಕ್ಕಿ ಉತ್ಸವ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ವ್ಯಕ್ತಿಗಳು ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತರನ್ನು ಜಿಗಣಿಯ ಹರಿಬಾಬು (25) ಮತ್ತು ವೀರಸಂದ್ರದ ರಂಗನಾಥ (30) ಎಂದು ಗುರುತಿಸಲಾಗಿದೆ.

ಹೆಬ್ಬಗೋಡಿನಲ್ಲಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ಮುಕ್ತಾಯಗೊಂಡ ಬಳಿಕ ಭಾನುವಾರ ಮುಂಜಾನೆ 5.30ರ ಸುಮಾರಿಗೆ ಪಲ್ಲಕ್ಕಿಯನ್ನು ಹೊತ್ತು ಟ್ರ್ಯಾಕ್ಟರ್‌ನಲ್ಲಿ ಇಬ್ಬರೂ ಮನೆಗೆ ತೆರಳುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್‌ಗೆ ದಾರಿ ಮಾಡಿಕೊಡಲು ಇಬ್ಬರು ಕೋಲನ್ನು ಬಳಸಿ ವಿದ್ಯುತ್ ತಂತಿಯನ್ನು ಮೇಲೆತ್ತಿದ್ದಾರೆ. ಮಳೆಯಿಂದಾಗಿ ಕೋಲು ಒದ್ದೆಯಾಗಿದ್ದರಿಂದ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಟ್ರ್ಯಾಕ್ಟರ್‌ಗೂ ಬೆಂಕಿ ಹೊತ್ತಿಕೊಂಡಿದೆ.

ಬೆಸ್ಕಾಂ ಲೈನ್‌ಮ್ಯಾನ್ ನಿಧನ

ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ರಾಯಸಂದ್ರ ಬಳಿ ಶನಿವಾರ ವಿದ್ಯುತ್ ತಂತಿಯನ್ನು ಕಂಬಕ್ಕೆ ಜೋಡಿಸುವ ವೇಳೆ 28 ವರ್ಷದ ಬೆಸ್ಕಾಂ ಲೈನ್‌ಮ್ಯಾನ್ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಮೃತರನ್ನು ಹಾಲನಾಯಕನಹಳ್ಳಿ ನಿವಾಸಿ ನಾಗರಾಜ ಎಂದು ಗುರುತಿಸಲಾಗಿದ್ದು, ರಾಯಚೂರು ಮೂಲದವರಾಗಿದ್ದಾರೆ. ಅವರಿಗೆ ಒಂದೂವರೆ ವರ್ಷದ ಮಗುವಿದೆ.

ನಾಗರಾಜ ಅವರು ವಿದ್ಯುತ್ ತಂತಿಗಳನ್ನು ಸರಿಪಡಿಸಲು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಆದರೆ ಕಂಬ ಏರಿದಾಗ ವಿದ್ಯುತ್ ಶಾಕ್ ತಗುಲಿ ಕೆಳಗೆ ಬಿದ್ದಿದ್ದು, ಗಾಯಗಳಾಗಿವೆ. ದಾರಿಹೋಕರು ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT