ರಾಹುಲ್ ಗಾಂಧಿ  
ರಾಜ್ಯ

ಬಿಜೆಪಿಯ ಮಾನನಷ್ಟ ಮೊಕದ್ದಮೆ: ಬೆಂಗಳೂರಿನಲ್ಲಿ ನಾಳೆ ರಾಹುಲ್ ಗಾಂಧಿ ಖುದ್ದು ವಿಚಾರಣೆಗೆ ಹಾಜರು

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

ಬೆಂಗಳೂರು: 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ ಶೇಕಡಾ 40 ಕಮಿಷನ್ ಮಾಡಿದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಮುಂದೆ ನಾಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಬಿಜೆಪಿ ವಿರುದ್ಧ ಕಮಿಷನ್ ಪಡೆದ ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌

ಜೂನ್ 1 ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.

ಪ್ರಕರಣದ ವಿಚಾರಣೆಗೆ ಕಳೆದ ವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿತ್ತು. ಇದೀಗ ಅದೇ ಪ್ರಕರಣದಲ್ಲಿ ನಾಳೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಲಿದ್ದಾರೆ.

ಏನಿದು ಪ್ರಕರಣ?:
2023 ರ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಂದಿನ ಆಡಳಿತಾರೂಢ ಬಿಜೆಪಿಯನ್ನು ಭ್ರಷ್ಟ ಎಂದು ಲೇಬಲ್ ಮಾಡುವ ಜಾಹೀರಾತುಗಳನ್ನು ಪ್ರಕಟಿಸಿತ್ತು. 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೋರಾತುಗಳನ್ನು ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

2023 ರ ಮೇ 5 ರಂದು ಕಾಂಗ್ರೆಸ್ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿತ್ತು. ಅದರಲ್ಲಿ, ಬಿಜೆಪಿ ಸರ್ಕಾರ ಕೋವಿಡ್ ಕಿಟ್ ಟೆಂಡರ್ ಡೀಲ್‌ಗಳಲ್ಲಿ ಶೇಕಡಾ 75, ಪಿಡಬ್ಲ್ಯೂಡಿ ಟೆಂಡರ್‌ಗಳಿಗೆ ಶೇಕಡಾ 40, ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ಮತ್ತು ಇತರ ವ್ಯವಹಾರಗಳಿಗೆ ಶೇಕಡಾ 30 ರಷ್ಟು ಕಮಿಷನ್ ಪಡೆದಿದೆ ಎಂದು ಆರೋಪಿಸಿತ್ತು. ಈ ಬಗ್ಗೆ ಆರೋಪಿಸಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ಕೇಶವ ಪ್ರಸಾದ್ ಅವರು 2023 ರ ಮೇ 8 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಕೈಗೆತ್ತಿಕೊಳ್ಳಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT