ಪ್ರಾತಿನಿಧಿಕ ಚಿತ್ರ 
ರಾಜ್ಯ

ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ

ಜೂನ್ 13ರವರೆಗೆ ವಿವಿಧ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಬೆಂಗಳೂರು: ಕರ್ನಾಟಕದ ಕೃಷ್ಣಾ ಜಲಾನಯನ ಪ್ರದೇಶದ ಸ್ಥಳಗಳಲ್ಲಿ ಜೂನ್ 13 ರವರೆಗೆ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಜೂನ್ 13ರವರೆಗೆ ವಿವಿಧ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.

ಜೂನ್ 8 ರಿಂದ 11 ರವರೆಗೆ ಮೇಲ್ಭಾಗದ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಕೃಷ್ಣಾ ಜಲಾನಯನ ಪ್ರದೇಶದ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.

ಈಮಧ್ಯೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಜೂನ್ 11ರವರೆಗೆ ಅಲ್ಲಲ್ಲಿ ತಕ್ಕಮಟ್ಟಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂನ್ 11ರ ನಂತರ ಈ ಪ್ರದೇಶದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ರಾಜ್ಯಾದ್ಯಂತ ಕೆಎಸ್‌ಎನ್‌ಡಿಎಂಸಿ ಟೆಲಿಮೆಟ್ರಿಕ್ ಮಳೆಮಾಪಕ ಸ್ಥಳಗಳ ಮಾಹಿತಿಯ ಪ್ರಕಾರ, ಜೂನ್ 5 ರಂದು ಬೆಂಗಳೂರು ನಗರ ಮತ್ತು ಕೋಲಾರದಲ್ಲಿ ವ್ಯಾಪಕ ಮಳೆ ವರದಿಯಾಗಿದೆ ಮತ್ತು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಸಂಗರೇಶಕೊಪ್ಪದಲ್ಲಿ ಗರಿಷ್ಠ ಮಳೆ 107.5 ಮಿಮೀ ದಾಖಲಾಗಿದೆ.

ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ -20 ರಿಂದ -59 ರಷ್ಟು ಗಮನಾರ್ಹ ಮಳೆ ಕೊರತೆ ಉಂಟಾಗಿದೆ. ಮಲೆನಾಡಿನಲ್ಲಿ 25 ಮಿಮೀ ಮಳೆಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, 18 ಮಿ.ಮೀ ಮಳೆ ದಾಖಲಾಗಿದೆ. ಕರಾವಳಿ ಪ್ರದೇಶಗಳಲ್ಲಿ 60 ಮಿಮೀ ಮಳೆಯನ್ನು ನಿರೀಕ್ಷಿಸಲಾಗಿತ್ತು. ಆದರೆ, ಜೂನ್ 1 ಮತ್ತು 5 ರ ನಡುವೆ ಸಾಮಾನ್ಯಕ್ಕಿಂತ ಕೇವಲ 25 ಮಿಮೀ ಮಳೆಯಾಗಿದೆ.

ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಬಳ್ಳಾರಿ, ಚಾಮರಾಜನಗರ, ದಕ್ಷಿಣ ಕನ್ನಡ, ಕಲಬುರಗಿ, ಕೋಲಾರ, ಮಂಡ್ಯ, ಮೈಸೂರು, ರಾಯಚೂರು, ತುಮಕೂರು, ಉಡುಪಿ ಮತ್ತು ಯಾದಗಿರಿಯ ಪ್ರತ್ಯೇಕ ಸ್ಥಳಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT