ಸಾಂದರ್ಭಿಕ ಚಿತ್ರ 
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಹೈದರಾಬಾದ್​ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.

ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ಬಂಧಿತ ಆರೋಪಿ ಸತ್ಯನಾರಾಯಣ್‌ ಒಡೆತನದ ಸಹಕಾರಿ ಬ್ಯಾಂಕ್ ಆಗಿದ್ದು, ಇದೇ ಬ್ಯಾಂಕ್‌ ಖಾತೆಗೆ 94.73 ಕೋಟಿ ರೂ. ವರ್ಗಾವಣೆಯಾಗಿತ್ತು. ಬ್ಯಾಂಕ್​ನ 18 ನಕಲಿ ಖಾತೆಗಳಿಗೆ 94.73 ಕೋಟಿ ರೂ. ವರ್ಗಾವಣೆಯಾಗಿದೆ.

ವರ್ಗಾವಣೆಯಾಗಿದ್ದ 94.73 ಕೋಟಿ ರೂ. ಪೈಕಿ ಬಹುಪಾಲು ಹಣ ಡ್ರಾ ಆಗಿದ್ದು, ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಕುರಿತು ಎಸ್​ಐಟಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಐವರನ್ನು ಎಸ್​ಐಟಿ ಬಂಧಿಸಿದೆ. ಪರಶುರಾಮ್, ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್, ಪದ್ಮನಾಭ, ಸತ್ಯನಾರಾಯಣ ಅವರನ್ನು ಎಸ್ ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಈ ಮಧ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ತಿಳಿಸಿದ್ದಾರೆ.

ಮುಂಬೈನಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಧಾನ ಕಛೇರಿ ಕಳೆದ ವಾರ ತನ್ನ ಎಂಜಿ ರೋಡ್ ಶಾಖೆಯನ್ನು ಒಳಗೊಂಡ ಸರ್ಕಾರಿ ಸ್ವಾಮ್ಯದ ವಾಲ್ಮೀಕಿ ಅಭಿವೃದ್ಧಿ ನಿಗಮದ ಸಾರ್ವಜನಿಕ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ದೂರು ಸಲ್ಲಿಸಿತ್ತು. ಈ ದೂರಿನ ಆಧಾರದ ಮೇಲೆ ಸಿಬಿಐ ಪ್ರಕರಣದ ತನಿಖೆಗೆಯನ್ನು ಕೈಗೆತ್ತಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT