ಕರ್ನಾಟಕ ಹೈಕೋರ್ಟ್ 
ರಾಜ್ಯ

ನಿರುದ್ಯೋಗದ ನೆಪ ಹೇಳಿ ವಿಚ್ಛೇದಿತ ಪತ್ನಿಗೆ ಪತಿ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್‌

ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಬೆಂಗಳೂರು: ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವಂತಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಕೋರಿ ನವೀನ್‌ (ಹೆಸರು ಬದಲಿಸಲಾಗಿದೆ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್‌ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದಾರೆ. ಹೀಗಾಗಿ, ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ, ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಗೊಳಿಸಬೇಕು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು ದಂಪತಿಗಳು ಪರಸ್ಪರ ಬೇರೆಯಾಗಿದ್ದಾರೆ. ಇದೀಗ ಪತಿ ತಾನು ಕೆಲಸ ಮಾಡುತ್ತಿಲ್ಲ ಎಂದು ಪತ್ನಿ ಹಾಗೂ ಅಪ್ರಾಪ್ತ ಮಗವಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಹಿಂದೆ ಸರಿಯುವುದು ಒಪ್ಪುವಂತದಲ್ಲ ಎಂದಿದೆ.

ಪ್ರಸ್ತುತ ಹಣದುಬ್ಬರದಿಂದಾಗಿ ಜನಸಮೂಹ ತತ್ತರಿಸಿದೆ. ಇದೇ ಕಾರಣದಿಂದ ಖಚ್ಚು- ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ, ಜೀವನ ನಿರ್ವಹಣೆ ಸುಲಭದ ಮಾತಲ್ಲ. ಬೆಳಗಾವಿ ನಗರದ ಜೀವನಶೈಲಿ ಅನ್ವಯ ಪತ್ನಿಗೆ 7 ಸಾವಿರ ಹಾಗೂ ಅಪ್ರಾಪ್ತ ಮಗುವಿಗೆ 3 ಸಾವಿರ ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ ಮಧ್ಯಂತರ ಪರಿಹಾರ ಸಮಂಜಸವಾಗಿದೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿದೆ.

ದಂಪತಿ ವಿಚ್ಛೇದನ ಪಡೆದು ಬೇರೆಯಾದಾಗ ಅರ್ಜಿದಾರರು ಉದ್ಯೋಗ ಕಳೆದುಕೊಂಡಿದ್ದರೂ ಅರ್ಜಿದಾರರ ಕುಟುಂಬಸ್ಥರು ವಾಣಿಜ್ಯ ಮಳಿಗೆ (ಕಮರ್ಷಿಯಲ್ ಕಾಂಪ್ಲೆಕ್ಸ್) ಹೊಂದಿರುವುದನ್ನು ಗಮನಿಸಿ ಬೆಳಗಾವಿ ಕೌಟುಂಬಿಕ ನ್ಯಾಯಾಲಯವು ಪತ್ನಿಗೆ 7 ಸಾವಿರ ಹಾಗೂ ಅಪ್ರಾಪ್ತ ಮಗುವಿಗೆ 3 ಸಾವಿರ ಮಾಸಿಕ ಜೀವನಾಂಶ ಪಾವತಿಸುವಂತೆ ಮಧ್ಯಂತರ ಆದೇಶ ಮಾಡಿತ್ತು. ಇದರ ರದ್ದತಿ ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT