ಸತ್ತುಬಿದ್ದಿರುವ ಮಂಗಗಳು 
ರಾಜ್ಯ

ಚಿಕ್ಕಮಗಳೂರಿನಲ್ಲಿ 34 ಕೋತಿಗಳ ಮಾರಣಹೋಮ: ಬಾಳೆ ಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧವಿಟ್ಟು, ತಲೆಗೆ ಬಡಿದು ದಾರುಣ ಹತ್ಯೆ!

ಬಾಳೆ ಹಣ್ಣಿನಲ್ಲಿ ಪ್ರಜ್ಷೆತಪ್ಪುವ ಔಷಧವಿಟ್ಟಿರುವ ಕಿಡಿಗೇರಿಗಳು, ಮಂಗಗಳ ಪ್ರಜ್ಞೆತಪ್ಪಿಸಿ ಬಳಿಕ ಅವುಗಳ ತಲೆಗೆ ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಎನ್‌ಆರ್‌ ಪುರದ ದ್ಯಾವನದಲ್ಲಿ ಮಂಗಗಳ ಮಾರಣಹೋಮ ನಡೆದಿದೆ. 34 ಮಂಗಳನ್ನು ಅಮಾನುಷವಾಗಿ ಕೊಂದು ರಸ್ತೆ ಬದಿಯಲ್ಲಿ ಎಸೆದಿರುವ ಘಟನೆ ವರದಿಯಾಗಿದೆ. ಈ ಹೀನ ಕೃತ್ಯಕ್ಕೆ ಪ್ರಾಣಿಪ್ರಿಯರು ಖಂಡನೆ ವ್ಯಕ್ತಪಡಿಸುತ್ತಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.

ಬಾಳೆ ಹಣ್ಣಿನಲ್ಲಿ ಪ್ರಜ್ಷೆತಪ್ಪುವ ಔಷಧವಿಟ್ಟಿರುವ ಕಿಡಿಗೇರಿಗಳು, ಮಂಗಗಳ ಪ್ರಜ್ಞೆತಪ್ಪಿಸಿ ಬಳಿಕ ಅವುಗಳ ತಲೆಗೆ ಹೊಡೆದು ಸಾಯಿಸಿದ್ದಾರೆ ಎನ್ನಲಾಗಿದೆ.

ಹೀಗೆ 34 ಮಂಗಗಳನ್ನು ಕೊಂದಿರುವ ದುಷ್ಕರ್ಮಿಗಳು ಮಂಗಗಳ ಕಳೇಬರಗಳನ್ನು ರಸ್ತೆ ಬದಿ ಎಸೆದು ಹೋಗಿದ್ದಾರೆ. ಮಂಗಗಳು ಸಾವನಪ್ಪಿರುವುದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

4 ಮರಿಗಳು ಸೇರಿ ಒಟ್ಟು 34 ಮಂಗಗಳನ್ನು ಕಿಡಿಗೇಡಿಗಳು ಹತ್ಯೆ ಮಾಡಿದ್ದಾರೆ. ಆದರೆ, ಯಾವ ಕಾರಣಕ್ಕಾಗಿ ಮಂಗಗಳನ್ನು ಸಾಯಿಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಕಾಡು ಪ್ರಾಣಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆಗೆ ಜಿಲ್ಲಾದ್ಯಂತ ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ. ಮಂಗಗಳನ್ನು ಕೊಂದಿರುವ ಆರೋಪಿಗಳ ಪತ್ತೆಗೆ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಮಲೆನಾಡಿನ ಜನ ತಮ್ಮ ಬೆಳೆಗಳಾದ ಕಾಫಿ ಮತ್ತು ಬಾಳೆಯನ್ನು ರಕ್ಷಿಸಲು ಮಂಗ ಹಿಡಿಯುವವರನ್ನು ನೇಮಿಸಿಕೊಳ್ಳುತ್ತಿರುತ್ತಾರೆ. ಆದರೆ, ಈ ಘಟನೆ ಉದ್ದೇಶಪೂರ್ವಕವಾಗಿ ನಡೆಸಿರುವ ಕ್ರೌರ್ಯವಾಗಿದೆ ಎಂದು ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಕೆಲವು ಕಿಡಿಗೇಡಿಗಳ ಉದ್ದೇಶಪೂರ್ವಕವಾಗಿ ನಡೆಸಿರುವ ಕೃತ್ಯವೆಂದು ತೋರುತ್ತದೆ. ಮಂಗಗಳನ್ನು ಕೊಂದಿರುವ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT