ಟ್ಯಾಂಕರ್ ನಲ್ಲಿ ನೀರು ಪೂರೈಕೆ 
ರಾಜ್ಯ

ನಗರದಲ್ಲಿ ಕಾವೇರಿ ನೀರು ಪೂರೈಕೆ ಪುನಾರಂಭ: BWSSB

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಬೆಂಗಳೂರು: ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಗುರುವಾರ ಇಡೀ ನಗರಕ್ಕೆ ಕಾವೇರಿ ನೀರಿನ ಸರಬರಾಜು ಸ್ಥಗಿತಗೊಳಿಸಲಾಗಿತ್ತು. ಇದರಿಂದ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆಗೆ ನೀರಿನ ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ಕಾಮಗಾರಿಗಳಲ್ಲದೆ, ವಾಜರಹಳ್ಳಿ, ವಸಂತಪುರ ಮತ್ತು ಕೊತ್ತನೂರು ಬಳಿ ಬಲ್ಕ್ ಫ್ಲೋ ಮೀಟರ್ ಅಳವಡಿಕೆ, ಲಕ್ಕಸಂದ್ರ ಮೆಟ್ರೊ ನಿಲ್ದಾಣದ ಬಳಿ ದೊಡ್ಡ ನೀರಿನ ಪೈಪ್‌ಗಳಲ್ಲಿ ಸೋರಿಕೆ ತಡೆಯುವ ಕೆಲಸ, ಮಾರತ್ತಹಳ್ಳಿ ಸೇತುವೆ ಬಳಿ ದೊಡ್ಡ ಪೈಪ್‌ಗಳನ್ನು ಜೋಡಿಸುವ ಕಾಮಗಾರಿಯನ್ನೂ ಜೂನ್ 6 ಮತ್ತು 7 ರಂದು ನಡೆಸಲಾಗಿದೆ. ಇದೀಗ ಕಾಮಗಾರಿ ಪೂರ್ಣಗೊಂಡಿದ್ದು, ಶನಿವಾರದಿಂದ ನೀರು ಪೂರೈಕೆ ಸಾಮಾನ್ಯವಾಗಿರಲಿದೆ. ಕಾವೇರಿ 5ನೇ ಹಂತ ಜುಲೈನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಮಗಾರಿ ಹಿನ್ನೆಲೆಯಲ್ಲಿ ಕಾವೇರಿ 1, 2, ಮತ್ತು 3ನೇ ಹಂತದ ನೀರು ಸರಬರಾಜು ಘಟಕವನ್ನು 12 ಗಂಟೆ ಕಾವೇರಿ 4ನೇ ಹಂತ, 1ನೇ, 2ನೇ ಘಟ್ಟಗಳ ನೀರು ಸರಬರಾಜು ಘಟಕಗಳನ್ನು 4 ಗಂಟೆ ಕಾಲ ಸ್ಥಗಿತಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT