ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ ಉರಗ ರಕ್ಷಕ ಪವನ್ ನಾಯ್ಕ್. 
ರಾಜ್ಯ

ಉತ್ತರ ಕನ್ನಡ: ಅಡುಗೆ ಮನೆಯೊಳಗೆ ಬುಸ್‌..ಬುಸ್‌: 12 ಅಡಿ ಉದ್ದದ ಕಾಳಿಂಗ ಸರ್ಪ ಕಂಡು ಹೌಹಾರಿದ ಕುಟುಂಬ!

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಳವಳ್ಳಿಯಲ್ಲಿ 12 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

ಯಳವಳ್ಳಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಳವಳ್ಳಿಯಲ್ಲಿ 12 ಅಡಿಗೂ ಹೆಚ್ಚು ಉದ್ದದ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊರಡ್ಡೆ ಸಮೀಪದ ಯಳವಳ್ಳಿ ಗ್ರಾಮದ ಗಣೇಶ್ ಭಟ್ ಎಂಬುವವರು ಚಹಾ ತಯಾರಿಸಲು ಅಡುಗೆ ಮನೆಗೆ ಹೋಗಿದ್ದರು. ಈ ವೇಳೆ ಒಲೆಯ ಸುತ್ತಲೂ ಏನೋ ಸುತ್ತಿಕೊಂಡಿರುವುದು ಕಂಡು ಬಂದಿದೆ.

ಅರಣ್ಯ ಪ್ರದೇಶದಲ್ಲಿ ಮನೆ ಇರುವುದರಿಂದ ವನ್ಯಜೀವಿಗಳು ಮನೆಗಳಿಗೆ ನುಗ್ಗುವುದು ಸಾಮಾನ್ಯ ಸಾಮಾನ್ಯವಾಗಿತ್ತು. ಆರಂಭದಲ್ಲಿ ಗಣೇಶ್ ಅವರು ರ್ಯಾಟ್ ಸ್ನೇಕ್ ಎಂದು ಶಂಕಿಸಿದ್ದರು. ಇದರಂತೆ ಅಲ್ಲಾಡಿಸಿ ಓಡಿಸಲು ಯತ್ನಿಸಿದ್ದಾರೆ. ಈ ವೇಳೆ ಕಾಳಿಂಗ ಸರ್ಪ ಹೆಡೆ ಎತ್ತಿ ದೊಡ್ಡ ರೀತಿಯಲ್ಲಿ ಬುಸ್ ಗುಡಲು ಆರಂಭಿಸಿದೆ. ಬಳಿಕ ಗಣೇಶ್ ಅವರಿಗೆ ಇದು ಸಾಮಾನ್ಯ ಹಾವಲ್ಲ ಎಂದು ತಿಳಿದು, ಕೂಡಲೇ ಉರಗ ರಕ್ಷಕ ಪವನ್ ನಾಯ್ಕ್ ಅವರಿಗೆ ಕರೆ ಮಾಡಿದ್ದಾರೆ.

ಪವನ್ ಸ್ಥಳಕ್ಕೆ ಧಾವಿಸಿ ಒಂದು ಗಂಟೆಯಲ್ಲಿ ಹಾವನ್ನು ರಕ್ಷಣೆ ಮಾಡಿದ್ದಾರೆ. ನಂತರ ಸಮೀಪದ ಅರಣ್ಯಕ್ಕೆ ಅದನ್ನು ಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT