ಸಂಗ್ರಹ ಚಿತ್ರ 
ರಾಜ್ಯ

ನಕಲಿ ವೈದ್ಯಕೀಯ ಹಾವಳಿ ವಿರುದ್ಧ ಕಠಿಣ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಇನ್ಮುಂದೆ ಕಡ್ಡಾಯ!

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ.

ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ ಎಂದು ಆದೇಶ ಹೊರಡಿಸಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕೆಪಿಎಂಇ ಕಾಯ್ದೆ ನಿಯಮ 5ರ ಪ್ರಕಾರ, ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರವನ್ನು ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಿದೆ.

ಕೆಲ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಪದ್ಧತಿ, ಮನೆ ಮದ್ದುಗಳು, ಬಾಡಿ ಮಸಾಜ್ ಹಾಗೂ ವಿವಿಧ ಥೆರಪಿಗಳ ‌ ಅನಧಿಕೃತ ಅಭ್ಯಾಸದಲ್ಲಿ ತೊಡಗಿಕೊಂಡಿರುವುದು ಗಮನಕ್ಕೆ ಬಂದಿದೆ. ಇವುಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆಗಳಾಗಿ ವರ್ಗೀಕರಿಸಲ್ಪಟ್ಟಿಲ್ಲ. ಆದ್ದರಿಂದ ಎಲ್ಲ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ಹೊರಭಾಗದಲ್ಲಿ ಮಾಹಿತಿ ಫಲಕವನ್ನು ಹಾಕಬೇಕು. ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ಹಸಿರು ಬಣ್ಣ ಸೂಚಿತ ಫಲಕವನ್ನು ಬಳಸಬೇಕು. ಈ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಲಾಗಿದೆ.

ಈ ನಿಯಮಗಳನ್ನು ಅನುಸರಿಸಲು ವಿಫಲವಾದಲ್ಲಿ, ಅಂತಹವರ ವಿರುದ್ಧ ಕೆಪಿಎಂಇ ಕಾಯ್ದೆಯಡಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ. ನಕಲಿ ವೈದ್ಯರಿಗೆ ಕಡಿವಾಣ ಹಾಕಲು ಕಠಿಣ ನಿಯಮ ಜಾರಿಗೊಳಿಸಲಾಗಿದೆ.

ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆ ಪರಾಮರ್ಶಿಸಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!