ಸಂಗ್ರಹ ಚಿತ್ರ online desk
ರಾಜ್ಯ

ಪ್ರಧಾನಿಯಾಗಿ ಮೋದಿ ಪದಗ್ರಹಣ: HDK, ಸೋಮಣ್ಣಗೆ ಒಲಿದ ಸಚಿವ ಸ್ಥಾನ!; ಪ್ರಜ್ವಲ್ ಕಾರು ಚಾಲಕ ಬಂಧನ; ಅರವಿಂದ್ ಬೆಲ್ಲದ ವಿರುದ್ಧ ಪ್ರಕರಣ- ಇಂದಿನ ಪ್ರಮುಖ ಸುದ್ದಿಗಳು 09-06-2024

ಪ್ರಧಾನಿಯಾಗಿ ಮೋದಿ ಪದಗ್ರಹಣ: HDK, ಸೋಮಣ್ಣಗೆ ಒಲಿದ ಸಚಿವ ಸ್ಥಾನ

ದೆಹಲಿಯ ರಾಷ್ಟ್ರಪತಿ ಭವನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಇಂದು ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಇಂದಿನಿಂದ ಅಸ್ತಿತ್ವಕ್ಕೆ ಬಂದಿದೆ. ಪದಹ್ರಹಣಕ್ಕೂ ಮುನ್ನ ಪ್ರಧಾನಿ ಮೋದಿ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸಮಾಧಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ, ಸೈನಿಕ ಸ್ಮಾರಕಗಳಿಗೆ ಭೇಟಿ ನೀಡಿ ನಮನ ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನಿ ಮೋದಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಮೋದಿ ಜೊತೆ ಬಿಜೆಪಿಯ ಸಂಸದರು, ಮಿತ್ರಪಕ್ಷಗಳ ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯದಿಂದ ಹೆಚ್ ಡಿ ಕುಮಾರಸ್ವಾಮಿ, ವಿ ಸೋಮಣ್ಣ, ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ಪ್ರಧಾನಿ ಮೋದಿ ಪದಗ್ರಹಣ ಕಾರ್ಯಕ್ರಮದಲ್ಲಿ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್, ಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಜಗ್ನಾತ್, ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ನೆರೆ ರಾಷ್ಟ್ರಗಳ ಮುಖ್ಯಸ್ಥರು ಭಾಗಿಯಾಗಿದ್ದರು.

ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಕಡ್ಡಾಯ

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್'ಗಳು ತಮ್ಮ ಕೆಪಿಎಂಇ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರವನ್ನು ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಿದೆ. ಈ ನಿಯಮಗಳನ್ನು ಅನುಸರಿಸಲು ವಿಫಲವಾದಲ್ಲಿ, ಅಂತಹವರ ವಿರುದ್ಧ ಕೆಪಿಎಂಇ ಕಾಯ್ದೆಯಡಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪ್ರಜ್ವಲ್ ಕಾರು ಚಾಲಕ ಬಂಧನ

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣದ ಸಂಬಂಧ ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಮ್ಯಾಪಿಂಗ್ ಮತ್ತು ಪೆನ್ ಡ್ರೈವ್ ಹಂಚಿಕೆ ಮಾಡಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ ಅವರನ್ನು ಬಂಧಿಸಿದೆ. ಕಾರ್ತಿಕ್ ಗೌಡ ಪ್ರಜ್ವಲ್ ಅವರ ಅಶ್ಲೀಲ ವಿಡಿಯೋಗಳನ್ನು ಹೊಂದಿರುವ ಪೆನ್‌ಡ್ರೈವ್ ನ್ನು ಮೊದಲು ಬಿಜೆಪಿ ಮುಖಂಡ ದೇವರಾಜೇಗೌಡಗೆ ನೀಡಿರುವುದಾಗಿ ವಿಚಾರಣೆ ವೇಳೆ ಹೇಳಿದ್ದರು.

ಚಿಕ್ಕೋಡಿಯಲ್ಲಿ ಅಪಘಾತ-2 ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಂದಿಗುಂದ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿತ್ತು. ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದರಾದರೂ ಅವರು ಬದುಕಿ ಉಳಿಯಲಿಲ್ಲ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಕೇಸ್

ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್​ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ವಿರುದ್ಧ ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ.2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿದ್ದಾಗ, ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಬಗ್ಗೆ ಪರಶುರಾಮ ದಾವಣಗೆರೆ ಎಂಬುವರು ಅರ್ಜಿ ಸಲ್ಲಿಸಿದ್ದರು. ಬಳಿಕ ಈ ಅರ್ಜಿಯನ್ನು ಹಿಂಪಡೆಯಲು ಉಪ ಮೇಯರ್ ಮೇಯ‌ರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT