ಚಿಕೋಡಿ ಕಾರು ಅಪಘಾತ 
ರಾಜ್ಯ

ಚಿಕ್ಕೋಡಿಯಲ್ಲಿ ಭೀಕರ ಕಾರು ಅಪಘಾತ; ಇಬ್ಬರ ಸಾವು, ಕಾರು ಬಿಟ್ಟು ಚಾಲಕ ಪರಾರಿ!

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯ ರಾಯಬಾದ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಈ ಭೀಕರ ಕಾರು ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು (Car Accident) ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಪಾಲಬಾವಿ ಗ್ರಾಮದ ಮಹಾಲಿಂಗ ನಿಂಗನೂರ (47) ಮತ್ತು ಈರಪ್ಪಾ ಉಗಾರೆ (32) ಎಂದು ಗುರುತಿಸಲಾಗಿದೆ.

ರಸ್ತೆಯಲ್ಲಿ ವೇಗವಾಗಿ ಬಂದ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ಕಂಬದ ಸಮೇತ ರಸ್ತೆ ಬದಿಯ ಜಮೀನಿಗೆ ನುಗ್ಗಿದೆ. ಡಿಕ್ಕಿ ರಭಸಕ್ಕೆ ಕಾರಿನ ಹಿಂಬದಿ ಕುಳಿತಿದ್ದ ಇಬ್ಬರಿಗೆ ತೀವ್ರ ರಕ್ತಸ್ರಾವವಾಗಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ.

ಕೂಡಲೇ ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದವರನ್ನು ರಕ್ಷಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT