ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಖಿನ್ನತೆಯಿಂದ ಬಳಲುತ್ತಿದ್ದ 34 ವರ್ಷದ ಯುವಕನೊಬ್ಬ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ 34 ವರ್ಷದ ಯುವಕನೊಬ್ಬ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪ್ಲಾಟ್‌ಫಾರ್ಮ್‌ನಲ್ಲಿದ್ದ ತುರ್ತು ಟ್ರಿಪ್ ಸಿಸ್ಟಮ್ ಬಟನ್ ಅನ್ನು ತ್ವರಿತವಾಗಿ ಬಳಸಿದ್ದರಿಂದ ಅದೃಷ್ಟವಶಾತ್ ಯುವಕ ಪ್ರಾಣಾಪಾಯಿಂದ ಪಾರಾಗಿದ್ದಾನೆ. ಆದರೆ ಆತನ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಿಂದ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ 33 ನಿಮಿಷಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿತ್ತು.

ಇದು 2024 ರಲ್ಲಿ ಮೆಟ್ರೋ ಟ್ರ್ಯಾಕ್‌ಗಳಲ್ಲಿ ನಡೆದ ಮೂರನೇ ಆತ್ಮಹತ್ಯೆ ಯತ್ನ ಪ್ರಕರಣವಾಗಿದೆ ಮತ್ತು ಒಬ್ಬ ವ್ಯಕ್ತಿ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ರಾತ್ರಿ 8.56 ಕ್ಕೆ ಚಲ್ಲಘಟ್ಟ ಕಡೆಗೆ ತೆರಳುತ್ತಿದ್ದ ರೈಲು ಹೊಸಹಳ್ಳಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪ್ಲಾಟ್‌ಫಾರ್ಮ್ 2 ರ ಒಬ್ಬ ಯುವಕ ಇದ್ದಕ್ಕಿದ್ದಂತೆ ಹಳಿ ಮೇಲೆ ಹಾರಿ ರೈಲಿನ ಕಡೆಗೆ ಧಾವಿಸಿದ್ದಾರೆ. ಇದು ರೈಲು ಹತ್ತಲು ಕಾಯುತ್ತಿದ್ದ ಇತರ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚವಾಣ್ ಅವರು TNIE ಗೆ ತಿಳಿಸಿದ್ದಾರೆ.

“ಆ ವ್ಯಕ್ತಿ ರೈಲಿನ ಕಡೆಗೆ ಓಡುತ್ತಿರುವುದನ್ನು ನೋಡಿದ ಯಾರೋ ತುರ್ತು ಟ್ರಿಪ್ ಸಿಸ್ಟಮ್ ಬಟನ್ ಒತ್ತಿದರು. ಇದು ಪ್ಲಾಟ್‌ಫಾರ್ಮ್‌ನಲ್ಲಿ ರೈಲನ್ನು ತಕ್ಷಣ ನಿಲುಗಡೆಗೆ ತರುತ್ತದೆ. ಆ ವ್ಯಕ್ತಿ ಹಳಿಗಳ ನಡುವೆ ಬಿದ್ದಿದ್ದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಅವರು ಹೇಳಿದ್ದಾರೆ.

ತುರ್ತು ಟ್ರಿಪ್ ಸಿಸ್ಟಮ್ ಬಟನ್ ಅನ್ನು ಸಾರ್ವಜನಿಕರು ಒತ್ತಿದರೋ ಅಥವಾ ಭದ್ರತಾ ಸಿಬ್ಬಂದಿ ಅಥವಾ ಮೆಟ್ರೋ ಸಿಬ್ಬಂದಿ ಒತ್ತಿದರೋ ಎಂಬುದು ನಮಗೆ ಇನ್ನೂ ತಿಳಿದು ಬಂದಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ನಿಖರವಾಗಿ ಏನಾಯಿತು ಎಂದು ತಿಳಿಯಲಿದೆ ಎಂದಿದ್ದಾರೆ.

ಯುವಕ ಖಿನ್ನತೆಯಿಂದ ಬಳಲುತ್ತಿದ್ದು, ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!