ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ

ಖಿನ್ನತೆಯಿಂದ ಬಳಲುತ್ತಿದ್ದ 34 ವರ್ಷದ ಯುವಕನೊಬ್ಬ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ 34 ವರ್ಷದ ಯುವಕನೊಬ್ಬ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದ ವೇಳೆ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪ್ಲಾಟ್‌ಫಾರ್ಮ್‌ನಲ್ಲಿದ್ದ ತುರ್ತು ಟ್ರಿಪ್ ಸಿಸ್ಟಮ್ ಬಟನ್ ಅನ್ನು ತ್ವರಿತವಾಗಿ ಬಳಸಿದ್ದರಿಂದ ಅದೃಷ್ಟವಶಾತ್ ಯುವಕ ಪ್ರಾಣಾಪಾಯಿಂದ ಪಾರಾಗಿದ್ದಾನೆ. ಆದರೆ ಆತನ ತಲೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಿಂದ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ 33 ನಿಮಿಷಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿತ್ತು.

ಇದು 2024 ರಲ್ಲಿ ಮೆಟ್ರೋ ಟ್ರ್ಯಾಕ್‌ಗಳಲ್ಲಿ ನಡೆದ ಮೂರನೇ ಆತ್ಮಹತ್ಯೆ ಯತ್ನ ಪ್ರಕರಣವಾಗಿದೆ ಮತ್ತು ಒಬ್ಬ ವ್ಯಕ್ತಿ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ರಾತ್ರಿ 8.56 ಕ್ಕೆ ಚಲ್ಲಘಟ್ಟ ಕಡೆಗೆ ತೆರಳುತ್ತಿದ್ದ ರೈಲು ಹೊಸಹಳ್ಳಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪ್ಲಾಟ್‌ಫಾರ್ಮ್ 2 ರ ಒಬ್ಬ ಯುವಕ ಇದ್ದಕ್ಕಿದ್ದಂತೆ ಹಳಿ ಮೇಲೆ ಹಾರಿ ರೈಲಿನ ಕಡೆಗೆ ಧಾವಿಸಿದ್ದಾರೆ. ಇದು ರೈಲು ಹತ್ತಲು ಕಾಯುತ್ತಿದ್ದ ಇತರ ಪ್ರಯಾಣಿಕರನ್ನು ಬೆಚ್ಚಿಬೀಳಿಸಿತು ಎಂದು ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚವಾಣ್ ಅವರು TNIE ಗೆ ತಿಳಿಸಿದ್ದಾರೆ.

“ಆ ವ್ಯಕ್ತಿ ರೈಲಿನ ಕಡೆಗೆ ಓಡುತ್ತಿರುವುದನ್ನು ನೋಡಿದ ಯಾರೋ ತುರ್ತು ಟ್ರಿಪ್ ಸಿಸ್ಟಮ್ ಬಟನ್ ಒತ್ತಿದರು. ಇದು ಪ್ಲಾಟ್‌ಫಾರ್ಮ್‌ನಲ್ಲಿ ರೈಲನ್ನು ತಕ್ಷಣ ನಿಲುಗಡೆಗೆ ತರುತ್ತದೆ. ಆ ವ್ಯಕ್ತಿ ಹಳಿಗಳ ನಡುವೆ ಬಿದ್ದಿದ್ದರಿಂದ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಅವರು ಹೇಳಿದ್ದಾರೆ.

ತುರ್ತು ಟ್ರಿಪ್ ಸಿಸ್ಟಮ್ ಬಟನ್ ಅನ್ನು ಸಾರ್ವಜನಿಕರು ಒತ್ತಿದರೋ ಅಥವಾ ಭದ್ರತಾ ಸಿಬ್ಬಂದಿ ಅಥವಾ ಮೆಟ್ರೋ ಸಿಬ್ಬಂದಿ ಒತ್ತಿದರೋ ಎಂಬುದು ನಮಗೆ ಇನ್ನೂ ತಿಳಿದು ಬಂದಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ನಿಖರವಾಗಿ ಏನಾಯಿತು ಎಂದು ತಿಳಿಯಲಿದೆ ಎಂದಿದ್ದಾರೆ.

ಯುವಕ ಖಿನ್ನತೆಯಿಂದ ಬಳಲುತ್ತಿದ್ದು, ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT