ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ (ಸಂಗ್ರಹ ಚಿತ್ರ) 
ರಾಜ್ಯ

ಸಬ್ ಕಾ ಸಾಥ್, ಸಬ್ ಕಾ ವಿಕಾಸಕ್ಕೆ ನಮ್ಮ ಬೆಂಬಲವಿದೆ: JDS ವರಿಷ್ಠ HD ದೇವೇಗೌಡ

ನವದೆಹಲಿಯಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಬೆಂಗಳೂರು: ನವದೆಹಲಿಯಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲ ನೀಡಿದ್ದಾರೆ.

ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ದೇವೇಗೌಡ, ಈ ಲೋಕಸಭಾ ಚುನಾವಣೆಯು ಕುತೂಹಲಕಾರಿ ಫಲಿತಾಂಶ ನೀಡಿದ್ದು, ದೇಶದ ಪ್ರಜಾಪ್ರಭುತ್ವದ ಕಂಪನ್ನು ಸಾಬೀತುಪಡಿಸಿದೆ. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ಅಪಖ್ಯಾತಿಗೊಳಿಸಲು ಕಾಂಗ್ರೆಸ್‍ನ ಕೊಳಕು ಪ್ರಚಾರವನ್ನು ಈ ಫಲಿತಾಂಶ ಬಹಿರಂಗಪಡಿಸುತ್ತದೆ. ದೇಶದ ಜನರು ಅವರ ದುರಹಂಕಾರಕ್ಕೆ ಪಾಠ ಕಲಿಸಿದ್ದಾರೆಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಬಾರಿಯ ಚುನಾವಣೆಯನ್ನು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಭಾವಿಸುತ್ತಿದೆ. ಆದರೆ ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಂತಹ ಅವರೇ ನಡೆಸುತ್ತಿರುವ ರಾಜ್ಯಗಳಲ್ಲಿ ಅವರು ಸೋತಿದ್ದಾರೆ. ಅವರು ಇತರ ಕೆಲವು ರಾಜ್ಯಗಳಲ್ಲಿ ತುಲನಾತ್ಮಕವಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಅವರ ಮಿತ್ರರು ಎಷ್ಟು ದಿನ ಸಹಿಸಿಕೊಳ್ಳುತ್ತಾರೆಂದು ನೋಡೋಣ ಎಂದು ‘ಇಂಡಿಯಾ ಕೂಟ’ದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಜೆಡಿಎಸ್‍ಗೆ ಕೇಂದ್ರ ಸಚಿವ ಸಂಪುಟ ದರ್ಜೆ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ದೇವೇಗೌಡ, ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಂತೆ ನಿಮ್ಮ ಕಾರ್ಯಸೂಚಿಯನ್ನು ಜನತೆಗೆ ತಲುಪಿಸಲು ಸಹಾಯ ಮಾಡುತ್ತೇವೆ. ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇಂದಿನ ಪ್ರಮಾಣವಚನ ಸ್ವೀಕಾರ ಸಮಾರಂಭದ ಭಾಗವಾಗಲು ನಾನು ಇಷ್ಟಪಡುತ್ತಿದ್ದೇನೆ. ಆದರೆ, ನನ್ನ ಆರೋಗ್ಯವು ದಹಲಿ ಪ್ರಯಾಣಿಸಲು ನನಗೆ ಅವಕಾಶ ನೀಡುತ್ತಿಲ್ಲ. ಆದರೂ, ನಿಮ್ಮ ಆತ್ಮೀಯ ಆಹ್ವಾನಕ್ಕಾಗಿ ತುಂಬಾ ಧನ್ಯವಾದಗಳು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರಕಾರಕ್ಕೆ ನನ್ನ ಪಕ್ಷವಾದ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT