ಸುದ್ದಿಗೋಷ್ಠಿ ನಡೆಸಿದ ಡಿಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

BBMP ವಲಯದ ಎಲ್ಲಾ ಪಾರ್ಕ್ ಗಳು ಇನ್ಮುಂದೆ ದಿನಪೂರ್ತಿ ಸಾರ್ವಜನಿಕರಿಗೆ ಮುಕ್ತ: ಡಿಸಿಎಂ ಆದೇಶ

ಬೆಂಗಳೂರಿನ ಎಲ್ಲಾ 1,200 ನೆರೆಹೊರೆಯ ಉದ್ಯಾನವನಗಳು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಹಿಂದೆ ಬೆಂಗಳೂರು ನಗರ ವ್ಯಾಪ್ತಿಯ ಉದ್ಯಾನವನಗಳು ಮಧ್ಯಾಹ್ನದಿಂದ ಸಂಜೆ 5 ಗಂಟೆಯವರೆಗೆ ಮುಚ್ಚಿರುತ್ತಿದ್ದವು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಸರಹದ್ದಿನಲ್ಲಿರುವ ಎಲ್ಲಾ ಪಾರ್ಕ್ ಗಳು ಇನ್ನು ಮುಂದೆ ಬೆಳಗಿನ ಜಾವ 5 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತೆರೆದಿರುತ್ತದೆ. ಈ ಸಂಬಂಧ ಆದೇಶ ಹೊರಡಿಸಿರುವ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು ಉದ್ಯಾನವನದಲ್ಲಿ ಹೆಚ್ಚಿನ ಭದ್ರತೆಗೆ ಪಾಲಿಕೆ ವತಿಯಿಂದ ಸಿಬ್ಬಂದಿ ನಿಯೋಜಿಸಲಾಗುವುದು ಎಂದರು.

ಬೆಂಗಳೂರಿನ ಎಲ್ಲಾ 1,200 ನೆರೆಹೊರೆಯ ಉದ್ಯಾನವನಗಳು ಬೆಳಿಗ್ಗೆ 5 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ತೆರೆದಿರುತ್ತವೆ. ಈ ಹಿಂದೆ ಬೆಂಗಳೂರು ನಗರ ವ್ಯಾಪ್ತಿಯ ಉದ್ಯಾನವನಗಳು ಮಧ್ಯಾಹ್ನದಿಂದ ಸಂಜೆ 5 ಗಂಟೆಯವರೆಗೆ ಮುಚ್ಚಿರುತ್ತಿದ್ದವು.

ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ನಿರ್ವಹಣೆ ಇಲಾಖೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿದರು.

ಇನ್ನು ನಗರ ವ್ಯಾಪ್ತಿಯಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್ ಗಳನ್ನು ತೆರವು ಮಾಡದಿರುವುದಕ್ಕೆ ಸಹಾಯಕ ಕಂದಾಯ ಅಧಿಕಾರಿ(ARO) ವಿರುದ್ಧ ಕೇಸು ದಾಖಲಿಸುವಂತೆ ಬಿಬಿಎಂಪಿ ಮುಖ್ಯಸ್ಥ ತುಷಾರ್ ಗಿರಿನಾಥ್ ಅವರಿಗೆ ಉಪ ಮುಖ್ಯಮಂತ್ರಿಗಳು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT