ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಹೈದರಾಬಾದ್ ಮೂಲದ ಯುವಕ ಸಾವು

ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ಚಿಕ್ಕಮಗಳೂರು: ಜಿಲ್ಲೆಯ ಕೆಮ್ಮಣ್ಣುಗುಂಡಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ 25 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಹೈದರಾಬಾದ್ ಮೂಲದ ಶ್ರವಣ್ ತನ್ನ ಸ್ನೇಹಿತನೊಂದಿಗೆ ರಮಣೀಯ ಸ್ಥಳಗಳನ್ನು ವೀಕ್ಷಿಸಲು ಚಿಕ್ಕಮಗಳೂರಿಗೆ ಬಂದಿದ್ದರು.

ಬಸ್ಸಿನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದ ಇಬ್ಬರು ಬಾಡಿಗೆಗೆ ಬೈಕ್ ತೆಗೆದುಕೊಂಡು ವಿವಿಧ ಸ್ಥಳಗಳಿಗೆ ತೆರಳಿದ್ದರು. ಕೆಲವೆಡೆ ಭೇಟಿ ನೀಡಿದ ಬಳಿಕ ಸೋಮವಾರ ಹೆಬ್ಬೆ ಜಲಪಾತ ತಲುಪಿದ್ದರು.

'ಮುಂಗಾರು ಮಳೆಯಿಂದಾಗಿ, ಜಲಪಾತವು ತುಂಬಿ ಹರಿಯುತ್ತಿದೆ. ಜಲಪಾತ ತುಂಬಾ ಆಳವಾಗಿರಲಿಲ್ಲವಾದರೂ, ಬಂಡೆಗಳು ತುಂಬಾ ಜಾರುತ್ತಿದ್ದವು. ಅವರಿಗೆ ಈಜು ಬರುತ್ತಿರಲಿಲ್ಲವಾದರೂ, ನೀರಿಗೆ ಇಳಿಯಲು ನಿರ್ಧರಿಸಿದ್ದರು' ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಶ್ರವಣ್ ಕಾಲು ಜಾರಿ ನೀರಿನಲ್ಲಿ ಮುಳುಗಲು ಪ್ರಾರಂಭಿಸಿದ್ದಾನೆ. ಈ ವೇಳೆ ಆತನ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಅಕ್ಕಪಕ್ಕದಲ್ಲಿದ್ದವರು ಶ್ರವಣ್ ಅವರನ್ನು ರಕ್ಷಿಸಿದ್ದಾರೆ.

'ಆತನನ್ನು ಹೊರಗೆ ತರುವಾಗ ಇನ್ನೂ ಜೀವಂತವಾಗಿದ್ದನು. ಹೆಬ್ಬೆ ಜಲಪಾತದ ಬಳಿ ಸಂದರ್ಶಕರಲ್ಲಿ ಒಬ್ಬ ವೈದ್ಯರಿದ್ದರು, ಅವರು ಆತನನ್ನು ಬದುಕಿಸಲು ಪ್ರಯತ್ನಿಸಿದ್ದಾರೆ. ನಂತರ ಆತನನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ' ಎಂದು ಅಧಿಕಾರಿ ಹೇಳಿದರು.

ಶ್ರವಣ್ ಇ-ಕಾಮರ್ಸ್ ಸಂಸ್ಥೆಯೊಂದರಲ್ಲಿ ಸಿಸ್ಟಮ್ ವಿಶ್ಲೇಷಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT