ಸಿಎನ್ ಮಂಜುನಾಥ್-ಡಿಕೆ ಸುರೇಶ್ 
ರಾಜ್ಯ

'ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೇ ಗೆಲ್ಲುತ್ತಾರೆ': 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಮನಗರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಟ್ಟಿಂಗ್ ಕಟ್ಟಿ 50 ಲಕ್ಷ ರೂಪಾಯಿ ಕಟ್ಟಿ ಸೋತು ಸಾಲದ ಸುಳಿಗೆ ಸಿಲುಕಿದ್ದ ರಾಮನಗರ ಜಿಲ್ಲೆಯ ಕೆಂಚನಕುಪ್ಪೆ ನಿವಾಸಿ 44 ವರ್ಷದ ಶಿವರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಿಡದಿ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆದಿದ್ದು ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಎನ್ ಮಂಜುನಾಥ್ ಅವರು ಬರೋಬ್ಬರಿ 1.9 ಲಕ್ಷ ಮತಗಳ ಅಂತರದಿಂದ ಡಿಕೆ ಸುರೇಶ್ ರನ್ನು ಸೋಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT