ಅಪಘಾತ (ಸಾಂಕೇತಿಕ ಚಿತ್ರ) online desk
ರಾಜ್ಯ

Hit and Run case: ಅಪ್ರಾಪ್ತ ಬಾಲಕ 11 ದಿನಗಳ ಕಾಲ ನಿಗಾ ಕೇಂದ್ರಕ್ಕೆ

ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಪ್ರಕರಣ ವರದಿಯಾಗಿತ್ತು. ಜೂ.1 ರಂದು ನಡೆದುಕೊಂಡು ಹೋಗುತ್ತಿದ್ದ ಜಯಪ್ಪ ಎಂಬ ಪಾದಚಾರಿಯೊಬ್ಬರಿಗೆ ವೇಗವಾಗಿ ಬಂದಿದ್ದ ದ್ವಿಚಕ್ರವಾಹನವೊಂದು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.

ಕೊಡಗು: ಹಿಟ್ & ರನ್ ಪ್ರಕರಣದಲ್ಲಿ ಭಾಗಿಯಾಗಿದ್ದ ಅಪ್ರಾಪ್ತನೋರ್ವನನ್ನು ಮೈಸೂರಿನ ಬಾಲಕರ ವೀಕ್ಷಣಾ ಕೇಂದ್ರಕ್ಕೆ (ನಿಗಾ ಕೇಂದ್ರ) ರವಾನಿಸಲಾಗಿದೆ.

ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಟ್ & ರನ್ ಪ್ರಕರಣ ವರದಿಯಾಗಿತ್ತು. ಜೂ.1 ರಂದು ನಡೆದುಕೊಂಡು ಹೋಗುತ್ತಿದ್ದ ಜಯಪ್ಪ ಎಂಬ ಪಾದಚಾರಿಯೊಬ್ಬರಿಗೆ ವೇಗವಾಗಿ ಬಂದಿದ್ದ ದ್ವಿಚಕ್ರವಾಹನವೊಂದು ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು. ಘಟನೆ ನಡೆಯುತ್ತಿದ್ದಂತೆಯೇ ವಾಹನ ಚಾಲನೆ ಮಾಡುತ್ತಿದ್ದ ವ್ಯಕ್ತಿ ಪರಾರಿಯಾಗಿದ್ದಾನೆ. ಘಟನೆ ಬಗ್ಗೆ ಜಯಪ್ಪ ಕುಟುಂಬ ಸದಸ್ಯರು ದೂರು ದಾಖಲಿಸಿ ಗಾಯಾಳುವನ್ನು ಹಾಸನದ ಆಸ್ಪತ್ರೆಗೆ ದಾಖಲಿಸಿದ್ದರು. ಜೂ.02 ರಂದು ಜಯಪ್ಪ ಮೃತಪಟ್ಟಿದ್ದರು.

ತನಿಖೆ ನಡೆಸಿದ ಶನಿವಾರ ಸಂತೆ ಪೊಲೀಸರಿಗೆ ಅಪಘಾತಕ್ಕೆ ಕಾರಣವಾದ ವಾಹನ ಯಶೋಧ ಎಂಬುವವರಿಗೆ ಸೇರಿದ್ದೆಂದೂ ಅದನ್ನು ಯಶೋಧ ಅವರ ಅಪ್ರಾಪ್ತ ಪುತ್ರ ಚಾಲನೆ ಮಾಡುತ್ತಿದ್ದನೆಂದೂ ತಿಳಿದುಬಂದಿದೆ.

ಈ ಮಾಹಿತಿಯನ್ನು ಆಧರಿಸಿ ಯಶೋಧ ಆಕೆಯ ಪತಿ ಕುಶಾಲ ಅವರ ವಿರುದ್ಧ ಐಪಿಸಿ ಸೆಕ್ಷನ್ 279 ಹಾಗೂ 304 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಪ್ರಾಪ್ತ ಬಾಲಕನನ್ನು ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈಗ ಅಪ್ರಾಪ್ತ ಬಾಲಕನನ್ನು 11 ದಿನಗಳ ಕಾಲ ನಿಗಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ಸ್ಕೂಟರ್ ನ್ನು ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT