ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ ಎಂಬ ಸುದ್ದಿ ತಿಳಿದ ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ಬಳಿ ಮಂಗಳವಾರ ಜಮಾಯಿಸಿದ್ದ ಜನ. 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೊಲೆ ಜಾಡು ಹಿಡಿಯಲು ಪ್ರಮುಖ ಸಾಕ್ಷಿಯಾಯ್ತು ಕಪ್ಪು ಬಣ್ಣದ SUV!

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿಬಂದಿದ್ದೇ ರೋಚಕ. ರಾಜಕಾಲುವೆಯಲ್ಲಿ ಶವ ಪತ್ತೆಯಾದ 2-3 ಗಂಟೆಗಳಲ್ಲಿಯೇ ಪೊಲೀಸರು ಮಹತ್ವದ ಸಾಕ್ಷ್ಯವನ್ನು ಸಂಗ್ರಹಿಸಿದ್ದರು. ತಾವೇ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಶರಣಾಗುವ ಮೊದಲೇ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿತ್ತು.

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿಬಂದಿದ್ದೇ ರೋಚಕ. ರಾಜಕಾಲುವೆಯಲ್ಲಿ ಶವ ಪತ್ತೆಯಾದ 2-3 ಗಂಟೆಗಳಲ್ಲಿಯೇ ಪೊಲೀಸರು ಮಹತ್ವದ ಸಾಕ್ಷ್ಯವನ್ನು ಸಂಗ್ರಹಿಸಿದ್ದರು. ತಾವೇ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಶರಣಾಗುವ ಮೊದಲೇ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿತ್ತು.

ಸುಮನಹಳ್ಳಿ ಸೇತುವೆ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಬೆಳಗಿನ ಜಾವ 3.04ರ ಸುಮಾರಿಗೆ ಕಪ್ಪು ಬಣ್ಣದ ಸ್ಕಾರ್ಪಿಯೋ ವಾಹನದ ಚಲನವಲನ ಸೆರೆಯಾಗಿದೆ. ಆದಾದ ಆರು ನಿಮಿಷಗಳ ನಂತರ, ಸ್ಕಾರ್ಪಿಯೋ ಹಿಂಬದಿಯ ಬಾಗಿಲು ತೆರೆದಿರುವಂತೆಯೇ ಅಲ್ಲಿಂದ ಹಿಂತಿರುಗಿರುವುದು ಕಂಡುಬಂದಿದೆ. ನಂತರ ಪೊಲೀಸರು ಸ್ಕಾರ್ಪಿಯೋ ವಾಹನದ ಬೆನ್ನುಹತ್ತಿದ್ದಾರೆ ಮತ್ತು ಹಲವಾರು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದ ದೃಶ್ಯಾವಳಿಗಳನ್ನು ವಿಶ್ಲೇಷಿಸಿದ ನಂತರ ಅದು ಪಟ್ಟಣಗೆರೆಯಲ್ಲಿರುವ ಶೆಡ್‌ಗೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ.

ಹತ್ಯೆಗೆ ಬಳಸಿದ್ದ ಎರಡು ಎಸ್‌ಯುವಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಎರಡೂ SUV ಗಳು ನಟನ ಹೆಸರಿನಲ್ಲಿಲ್ಲ.

ಕೆಂಪು ಬಣ್ಣದ ಎಸ್‌ಯುವಿ ಆರ್‌ಆರ್‌ನಗರದ ಪಬ್‌ನ ಮಾಲೀಕ ವಿನಯ್ ಹೆಸರಿನಲ್ಲಿ ನೋಂದಣಿಯಾಗಿದ್ದು, ಕಪ್ಪು ಬಣ್ಣದ ಸ್ಕಾರ್ಪಿಯೋ ಪ್ರದುಶ್ ಎಂಬುವವರ ಹೆಸರಿನಲ್ಲಿ ನೋಂದಣಿಯಾಗಿದೆ. ಕೊಲೆ ಮಾಡಲಾಗಿದೆ ಎಂದು ಹೇಳಲಾದ ಶೆಡ್‌ನಿಂದ ಸಂತ್ರಸ್ತನ ಶವವನ್ನು ಸ್ಕಾರ್ಪಿಯೋದಲ್ಲಿ ತಂದು ಸುಮನಹಳ್ಳಿ ಸೇತುವೆ ಬಳಿಯ ಚರಂಡಿಗೆ ಎಸೆಯಲಾಗಿದೆ.

ವಶಪಡಿಸಿಕೊಂಡ ಎಸ್‌ಯುವಿಗಳಲ್ಲಿ ಮದ್ಯದ ಬಾಟಲಿಗಳೂ ಪತ್ತೆಯಾಗಿವೆ ಎನ್ನಲಾಗಿದೆ. ಈ ಎರಡು ಎಸ್‌ಯುವಿಗಳ ಚಲನವಲನದ ದೃಶ್ಯಾವಳಿಗಳು ಶೆಡ್ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿಯೂ ಸೆರೆಯಾಗಿದೆ. ಭಾನುವಾರ ಬೆಳಗಿನ ಜಾವ 3.27ರ ಸುಮಾರಿಗೆ ವಾಹನಗಳು ಸಂಚರಿಸುತ್ತಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT