ಹೆಚ್ ಕೆ ಪಾಟೀಲ್  online desk
ರಾಜ್ಯ

ಪೊಲೀಸ್ ಠಾಣೆಗಳನ್ನು ಶಾಮಿಯಾನ ಹಾಕಿ ಮುಚ್ಚುವುದಕ್ಕೆ ಯಾವುದೇ ಕಾನೂನು ಇಲ್ಲ: ಕಾನೂನು ಸಚಿವ

ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿದ್ದ ಪೊಲೀಸ್ ಠಾಣೆಯನ್ನು ಶಾಮಿಯಾನ ಹಾಕಿ ಮುಚ್ಚಿರುವುದರ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿದ್ದ ಪೊಲೀಸ್ ಠಾಣೆಯನ್ನು ಶಾಮಿಯಾನ ಹಾಕಿ ಮುಚ್ಚಿರುವುದರ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಗೆ ಯಾವುದೇ ವಿಶೇಷ ಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿಲ್ಲ. ಆರೋಪಿಯನ್ನು ವಿಚಾರಣೆ ಮಾಡಲಾಗುತ್ತಿರುವ ಪೊಲೀಸ್ ಠಾಣೆಯನ್ನು ಟೆಂಟ್ ಅಥವಾ ಶಾಮಿಯಾನ ಹಾಕಿ ಮುಚ್ಚುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶಗಳೂ ಇಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಪೊಲೀಸ್ ಠಾಣೆಗೆ ಟೆಂಟ್ ಹಾಕಿರುವ ಬಗ್ಗೆ ಮಾಧ್ಯಮದವರು ಸಚಿವ ಎಚ್.ಕೆ.ಪಾಟೀಲ್ ಅವರನ್ನು ಪ್ರಶ್ನಿಸಿದಾಗ, ಠಾಣೆಗೆ ಟೆಂಟ್ ಹಾಕಲು ಕಾನೂನು ಇಲ್ಲ ಎಂದು ಪಾಟೀಲ್ ಹೇಳಿದರು. ಆದರೆ ಯಾವ ಸಂದರ್ಭದಲ್ಲಿ ಪೊಲೀಸರು ಈ ಕೃತ್ಯ ಎಸಗಿದ್ದಾರೆ ಎಂಬುದು ನಮಗೆ ತಿಳಿದಿಲ್ಲ ಎಂದು ಸಚಿವರು ಹೇಳಿದ್ದಾರೆ.

ನಟ ಪೊಲೀಸ್ ಠಾಣೆಯೊಳಗೆ ಇದ್ದುದರಿಂದ 144 ಸೆಕ್ಷನ್ ವಿಧಿಸಿದ್ದರಿಂದ ಬೆಂಗಳೂರಿನ ಪ್ರದೇಶದಲ್ಲಿ ಗದ್ದಲ ಉಂಟಾಗಿತ್ತು. ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಇರಿಸಲಾಗಿರುವುದರಿಂದ ಅವರನ್ನು ಪೊಲೀಸ್ ಠಾಣೆಯೊಳಗೆ ಇರಿಸಲು ಸಾಧ್ಯವಿಲ್ಲ ಮತ್ತು ಅದು ಪೊಲೀಸ್ ಠಾಣೆಗೆ ಟೆಂಟ್‌ ಹಾಕಲು ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇಡೀ ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಆವರಿಸುವ ಅಗತ್ಯ ಏನಿತ್ತು ಎಂದು ಮಾಧ್ಯಮದವರು ಪ್ರಶ್ನಿಸಿದಾಗ, ತಮಗೆ ಗೊತ್ತಿಲ್ಲ, ಗೊತ್ತಿಲ್ಲದೆ ಪ್ರತಿಕ್ರಿಯಿಸಲಾರೆ ಎಂದು ಪಾಟೀಲ್ ಹೇಳಿದ್ದಾರೆ.

ಇನ್ನು ಸಚಿವ ಪಾಟೀಲ್ ಮಾತನಾಡಿ, ಪೊಲೀಸ್ ಠಾಣೆಯೊಳಗೆ ಯಾರೇ ಇದ್ದರೂ ಆರೋಪಿಗಳೇ ಹೊರತು ವಿಶೇಷ ಸೌಲಭ್ಯ ನೀಡಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT