ಡಾ. ಶರಣ ಪ್ರಕಾಶ್ ಪಾಟೀಲ್ 
ರಾಜ್ಯ

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.

ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪತಿ ವೈದ್ಯಕೀಯ ಕಾಲೇಜುಗಳ ಆಡಳಿತ ಸಂಘದ ವತಿಯಿಂದ ನಡೆದ ವಿಶ್ವ ಹೋಮಿಯೋಪತಿ ದಿನಾಚರಣೆ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೇ ಇರುವವರು ಕ್ಲಿನಿಕ್ ಗಳನ್ನು ಸ್ಥಾಪಿಸಿ ಜನರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ನಕಲಿ ವೈದ್ಯರ ಕಾರ್ಯವೈಖರಿ ಬಗ್ಗೆ ನಮಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಡಾ.ಪಾಟೀಲ ಹೇಳಿದರು.

ಕೆಲವರು ಮೋಸಗಾರರು ಅದರಲ್ಲೂ ಗ್ರಾಮೀಣ ಭಾಗದ ಜನರ ಲಾಭ ಪಡೆದು ಅವರಿಗೆ ನಕಲಿ ಚಿಕಿತ್ಸೆ ನೀಡುತ್ತಿದ್ದಾರೆ. ಅಕ್ರಮ ಎಂದು ಗೊತ್ತಿದ್ದರೂ ಕೆಲವರು ನಕಲಿ ಚಿಕಿತ್ಸೆ ನೀಡುತ್ತಲೇ ಇದ್ದಾರೆ. ನಕಲಿ ವೈದ್ಯರು ಮತ್ತು ಅವರ ನಕಲಿ ಚಿಕಿತ್ಸೆಗೆ ಕಡಿವಾಣ ಹಾಕಲು ನಮ್ಮ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಡಾ.ಪಾಟೀಲ್ ಹೇಳಿದರು. ನಕಲಿ ಚಿಕಿತ್ಸಾಲಯಗಳು ಮತ್ತು ನಕಲಿ ವೈದ್ಯರ ಕಾರ್ಯಚಟುವಟಿಕೆಗಳ ಬಗ್ಗೆ ಸರ್ಕಾರದೊಂದಿಗೆ ವಿವರಗಳನ್ನು ಹಂಚಿಕೊಳ್ಳಲು ಜನರಿಗೆ ಕರೆ ನೀಡಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT