ರೇಣುಕಾಸ್ವಾಮಿ, ದರ್ಶನ್ 
ರಾಜ್ಯ

ನಟ ದರ್ಶನ್ ಪ್ರಕರಣ: ಮರಣೋತ್ತರ ಪರೀಕ್ಷೆ ವರದಿ ತಿರುಚಲು ಪ್ರಯತ್ನ 'ಹೃದಯಾಘಾತ' ಎಂದು ತೋರಿಸಲು ವೈದ್ಯರಿಗೆ ರೂ.1 ಕೋಟಿ ಆಫರ್!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಿದಾಗಿನಿಂದ ಬೆಚ್ಚಿಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿಗಳು ನೀಡಿದ ಚಿತ್ರಹಿಂಸೆಯಿಂದ ಉಂಟಾದ ಆಘಾತ ಮತ್ತು ರಕ್ತಸ್ರಾವದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಅವರ ಗ್ಯಾಂಗ್ ನ್ನು ಬಂಧಿಸಿದಾಗಿನಿಂದ ಬೆಚ್ಚಿಬೀಳಿಸುವ ಸಂಗತಿಗಳು ಹೊರಬೀಳುತ್ತಿವೆ. ಆರೋಪಿಗಳು ನೀಡಿದ ಚಿತ್ರಹಿಂಸೆಯಿಂದ ಉಂಟಾದ ಆಘಾತ ಮತ್ತು ರಕ್ತಸ್ರಾವದಿಂದ ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ.

ಆದರೆ, ದರ್ಶನ್ ಮೇಲಿನ ಕೊಲೆ ಆರೋಪವನ್ನು ಕೈಬಿಡಲು ಆರೋಪಿಗಳು ಮರಣೋತ್ತರ ಪರೀಕ್ಷೆಯ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ತೋರಿಸಲು ಮರಣೋತ್ತರ ಪರೀಕ್ಷೆ ನಡೆಸಿದ ಅಧಿಕಾರಿಗಳಿಗೆ 1 ಕೋಟಿ ರೂ. ಆಮಿಷವೊಡಿರುವುದಾಗಿ ತಿಳಿದುಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಮತ್ತು ಇತರ 16 ಮಂದಿಯನ್ನು ಬಂಧಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಪವಿತ್ರಾ ಗೌಡ ಅವರಿಗೆ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಅಪಹರಿಸಿ, ಬೆಂಗಳೂರಿಗೆ ಕರೆತಂದು, ಶೆಡ್‌ನಲ್ಲಿ ಇರಿಸಿ, ಕ್ರೂರವಾಗಿ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೀಗ ಮರಣೋತ್ತರ ಪರೀಕ್ಷೆ ವರದಿಯಲ್ಲಿ ರೇಣುಕಾಸ್ವಾಮಿ ಸಾವಿಗೂ ಮುನ್ನ ಕ್ರೂರವಾಗಿ ಚಿತ್ರಹಿಂಸೆ ನೀಡಿರುವುದು ದೃಢಪಟ್ಟಿದೆ. ಆತನ ದೇಹದಲ್ಲಿ ನಾಲ್ಕು ಮುರಿತಗಳು ಸೇರಿದಂತೆ 15 ಗಾಯದ ಗುರುತುಗಳಿವೆ ಎಂದು ಅದು ಹೇಳಿದೆ.

ಶೆಡ್‌ನಲ್ಲಿದ್ದ ಮಿನಿ ಟ್ರಕ್‌ಗೆ ರೇಣುಕಾಸ್ವಾಮಿಯ ತಲೆಯನ್ನು ಹೊಡೆಯಲಾಗಿದೆ. ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬರು, ಪೊಲೀಸ್ ಅಪ್ರೋವರ್ ಆಗಲು ಒಪ್ಪಿಕೊಂಡಿದ್ದು, ದರ್ಶನ್ ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಬಲದಿಂದ ಒದ್ದು, ಆತನ ತಲೆಯನ್ನು ಮಿನಿ ಟ್ರಕ್‌ಗೆ ಗುದ್ದಿಸಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT