ಬಂಧಿತ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ, ನಟ ದರ್ಶನ್ ಸೇರಿ ಬಂಧಿತ ಆರೋಪಿಗಳ ಸಂಖ್ಯೆ 16!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜತೆಗೆ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಸರೆಂಡರ್‌ ಆಗಿದ್ದು, ಕೂಡಲೇ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ.

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜತೆಗೆ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಸರೆಂಡರ್‌ ಆಗಿದ್ದು, ಕೂಡಲೇ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ.

ಪೊಲೀಸರ ಎದುರು ಶರಣಾದ ಆರೋಪಿಗಳು

ಇನ್ನು ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದು, ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದು ಆ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದಂತಾಗಿದೆ.

ಆರೋಪಿಗಳ ಮೊಬೈಲ್ ಫೋನ್ FSLಗೆ ರವಾನೆ

ಇದೇ ವೇಳೆ ಅನ್ನಪೂರ್ಣೇಶ್ವರಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳಿಂದ ಜಪ್ತಿ ಮಾಡಲಾದ 14 ಮೊಬೈಲ್ ಫೋನ್ ಗಳನ್ನು ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ. ಮೊಬೈಲ್‌ನಲ್ಲಿ ಹಲವಾರು ಮಾಹಿತಿಗಳು ಡಿಲೀಟ್ ಆಗಿರುವ ಅನುಮಾನ ಇದ್ದು, ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ (FSL) ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT