ಬಂಧಿತ ಆರೋಪಿಗಳಾದ ಅನುಕುಮಾರ್ ಮತ್ತು ಜಗದೀಶ್ 
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರ ಬಂಧನ, ನಟ ದರ್ಶನ್ ಸೇರಿ ಬಂಧಿತ ಆರೋಪಿಗಳ ಸಂಖ್ಯೆ 16!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜತೆಗೆ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಸರೆಂಡರ್‌ ಆಗಿದ್ದು, ಕೂಡಲೇ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ.

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಜತೆಗೆ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಸರೆಂಡರ್‌ ಆಗಿದ್ದು, ಕೂಡಲೇ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ್ ಅಲಿಯಾಸ್‌ ಅನು, ಜಗದೀಶ್ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ.

ಪೊಲೀಸರ ಎದುರು ಶರಣಾದ ಆರೋಪಿಗಳು

ಇನ್ನು ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಾಕರ್ ಅವರಿಗೆ ಶರಣಾಗಿದ್ದು, ಅನು ಚಿತ್ರದುರ್ಗದ ಸಿಹಿನೀರ ಹೊಂಡ ನಿವಾಸಿಯಾದರೆ, ಜಗದೀಶ್ ಚಿತ್ತದುರ್ಗದ ರೈಲ್ವೆ ಸ್ಟೇಶನ್ ಏರಿಯಾ ನಿವಾಸಿಯಾಗಿದ್ದಾನೆ. ಸದ್ಯ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದು ಆ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದಂತಾಗಿದೆ.

ಆರೋಪಿಗಳ ಮೊಬೈಲ್ ಫೋನ್ FSLಗೆ ರವಾನೆ

ಇದೇ ವೇಳೆ ಅನ್ನಪೂರ್ಣೇಶ್ವರಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳಿಂದ ಜಪ್ತಿ ಮಾಡಲಾದ 14 ಮೊಬೈಲ್ ಫೋನ್ ಗಳನ್ನು ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ. ಮೊಬೈಲ್‌ನಲ್ಲಿ ಹಲವಾರು ಮಾಹಿತಿಗಳು ಡಿಲೀಟ್ ಆಗಿರುವ ಅನುಮಾನ ಇದ್ದು, ಈ ಹಿನ್ನೆಲೆಯಲ್ಲಿ ಮಾಹಿತಿ ಸಂಗ್ರಹಕ್ಕಾಗಿ ಡಾಟಾ ರಿಟ್ರೀವ್‌ಗಾಗಿ ಎಫ್‌ಎಸ್‌ಎಲ್‌ಗೆ (FSL) ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT