ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾದ ಅನುಕುಮಾರ್ ಹಾಗೂ ಜಗದೀಶ್  online desk
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರೆದುರು ಶರಣಾಗಿದ್ದ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವು

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪುತ್ರ ಪೊಲೀಸರಿಗೆ ಶರಣಾಗಿರುವ ಸುದ್ದಿ ತಿಳಿದು ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ (60) ಕುಸಿದುಬಿದ್ದು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪುತ್ರ ಪೊಲೀಸರಿಗೆ ಶರಣಾಗಿರುವ ಸುದ್ದಿ ತಿಳಿದು ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ (60) ಕುಸಿದುಬಿದ್ದು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.

ಸಿಹಿ ನೀರು ಹೊಂಡ ಎಂಬಲ್ಲಿ ಈ ಘಟನೆ ನಡೆದಿದೆ. ಕುಸಿದುಬೀಳುತ್ತಿದ್ದಂತೆಯೇ ಚಂದ್ರಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಕಡಿಮೆ ರಕ್ತದೊತ್ತಡದಿಂದಾಗಿ ಹೃದಯ ಸ್ತಂಭನ ಸಂಭವಿಸಿ ಅವರು ಸಂಜೆ 7 ಗಂಟೆ ವೇಳೆಗೆ ಮೃತಪಟ್ಟಿದ್ದಾರೆ.

ಒಂದೆಡೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅನುಕುಮಾರ್ ಪೊಲೀಸರ ಮುಂದೆ ಶರಣಾಗಿದ್ದರೆ ಮತ್ತೊಂದೆಡೆ ಅವರ ತಂದೆ ಚಂದ್ರಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಆಟೋ ಚಾಲಕನಾಗಿದ್ದ ಅನುಕುಮಾರ್ ಕುಟುಂಬದಲ್ಲಿ ದುಡಿಯುತ್ತಿದ್ದ ಏಕೈಕ ವ್ಯಕ್ತಿಯಾಗಿದ್ದು ಅವರು ಕುಟುಂಬದ ಆಧಾರವಾಗಿದ್ದರು.

ಮಗನ ಬಂಧನ ಮತ್ತು ಪತಿ ಚಂದ್ರಪ್ಪನ ಸಾವಿನಿಂದ ಅನುಕುಮಾರ್ ಅವರ ತಾಯಿ ಜಯಮ್ಮ ತೀವ್ರ ಅಘಾತಕ್ಕೆ ಒಳಗಾಗಿ, ನಡೆದ ಘಟನೆಗಳಿಗೆ ದರ್ಶನ್‌ಗೆ ಶಾಪ ಹಾಕುತ್ತಿದ್ದದ್ದು ಕಂಡುಬಂದಿತು.

ತನ್ನ ಮಗ ನಿರಪರಾಧಿಯಾಗಿದ್ದು, ಆತನನ್ನು ಬಿಡುಗಡೆ ಮಾಡುವಂತೆ ಪೊಲೀಸರನ್ನು ಜಯಮ್ಮ ವಿನಂತಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT