ನಟ ದರ್ಶನ್ ಮತ್ತು ರೇಣುಕಾಸ್ವಾಮಿ 
ರಾಜ್ಯ

Darshan Case: ತೀವ್ರ ಆಘಾತ, ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು: ಮರಣೋತ್ತರ ವರದಿ

ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು: ನಟ ದರ್ಶನ್ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದ್ದು, ತೀವ್ರ ಆಘಾತ ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವಾಗಿದೆ ಎಂದು ಹೇಳಲಾಗಿದೆ.

ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ಅವರು ಚಿತ್ರಹಿಂಸೆ ನೀಡಿ ಹತ್ಯೆಗೈದಿದ್ದಾರೆ ಎನ್ನಲಾದ ರೇಣುಕಾಸ್ವಾಮಿ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ರೇಣುಕಾಸ್ವಾಮಿ ತೀವ್ರ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಶವಪರೀಕ್ಷೆ ವರದಿಯಲ್ಲಿ ತಿಳಿಸಲಾಗಿದೆ.

ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ ಎಂದು ಹೇಳಿದ್ದು, ರೇಣುಕಾ ಸ್ವಾಮಿ ಅವರ ದೇಹದ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ.

ರೇಣುಕಾಸ್ವಾಮಿ ಮೈ ಮೇಲೆ ಇರುವ ಗಾಯದ ಗುರುತುಗಳು ಮರದ ಕೋಲು, ಚರ್ಮದ ಬೆಲ್ಟ್ ಹಾಗೂ ಹಗ್ಗದಿಂದ ಹೊಡೆದ ಗುರುತುಗಳಾಗಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

ತಲೆಗೆ ತೀವ್ರ ಗಾಯ

ಇನ್ನು ರೇಣುಕಾಸ್ವಾಮಿ ಅವರ ತಲೆಯನ್ನು ಶೆಡ್ಡಿನಲ್ಲಿ ನಿಂತಿದ್ದ ಮಿನಿ ಟ್ರಕ್‌ಗೆ ಹೊಡೆಯಲಾಗಿದೆ ಎಂದು ಶವಪರೀಕ್ಷೆ ವರದಿ ಹೇಳಲಾಗಿದ್ದು, ಈ ವಾಹನವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾ ಸ್ವಾಮಿಗೆ ಚಿತ್ರಹಿಂಸೆ ನೀಡಲು ಬಳಸಿದ ಮರದ ಕೋಲುಗಳು, ಚರ್ಮದ ಬೆಲ್ಟ್ ಮತ್ತು ಹಗ್ಗವನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತಲಾ 5 ಲಕ್ಷ ರೂ ನೀಡಿದ್ದ ದರ್ಶನ್?

ಇನ್ನು ಕೊಲೆ ಬಳಿಕ ತಾವೇ ಕೊಲೆ ಮಾಡಿದ್ದು ಎಂದು ಆರೋಪ ಹೊತ್ತುಕೊಳ್ಳಲು ಮೂವರು ಆರೋಪಿಗಳಿಗೆ ನಟ ದರ್ಶನ್ ತಲಾ 5 ಲಕ್ಷ ರೂ ನೀಡಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ವೇಳೆ ಈ ಮಾಹಿತಿಯನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT