ಮೈಶುಗರ್‌ 
ರಾಜ್ಯ

ಕಬ್ಬು ಅರೆಯಲು ಮೈಶುಗರ್‌ ಸಜ್ಜು, ಜೂ.23ರಂದು ಬಾಯ್ಲರ್ ಕಾರ್ಯಾಚರಣೆ ಆರಂಭ!

ಮೈಸೂರು ಸಕ್ಕರೆ ಕಾರ್ಖಾನೆ (ಮೈಶುಗರ್‌) 2024-25ನೇ ಸಾಲಿನ ಕಬ್ಬು ಅರೆಯುವಿಕೆಗೆ ಸಜ್ಜಾಗಿದೆ. ಜೂ.23ರಂದು ಬಾಯ್ಲರ್ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಮೈಸೂರು ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಮೈಸೂರು: ಮೈಸೂರು ಸಕ್ಕರೆ ಕಾರ್ಖಾನೆ (ಮೈಶುಗರ್‌) 2024-25ನೇ ಸಾಲಿನ ಕಬ್ಬು ಅರೆಯುವಿಕೆಗೆ ಸಜ್ಜಾಗಿದೆ. ಜೂ.23ರಂದು ಬಾಯ್ಲರ್ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಮೈಸೂರು ಕಾರ್ಖಾನೆ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಮೈಸೂರು ಅತಿಥಿ ಗೃಹದಲ್ಲಿ ರೈತ ಮುಖಂಡರು ಹಾಗೂ ಇತರೆ ಸಂಘಟನೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಟನ್‌ ಕಬ್ಬಿಗೆ 3,150 ರೂ.ಗೆ ರೈತರಿಗೆ ನೆಮ್ಮದಿ ಇಲ್ಲದ ಕಾರಣ ರೈತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಬೆಲೆ ನಿಗದಿ ಮಾಡಲಾಗುವುದು, ಮೈಸೂರು ಕಾರ್ಖಾನೆ ಆಡಳಿತ ಮಂಡಳಿ ರೈತರಿಂದ ಸಲಹೆ ಪಡೆದು ಕಾರ್ಖಾನೆ ಅಭಿವೃದ್ಧಿಗೆ ಒತ್ತು ನೀಡಲಿದೆ ಎಂದರು.

ಜೇಷ್ಠತಾ ಪಟ್ಟಿ ಆಧರಿಸಿ ಕಬ್ಬು ಕಟಾವಿಗೆ ಅನುಮತಿ ನೀಡಲಾಗುವುದು ಎಂದ ಗಂಗಾಧರ್, ಜಮೀನುದಾರರು ಮತ್ತು ಗ್ಯಾಂಗ್‌ಮನ್‌ಗಳು ರೈತರಿಗೆ ಕಿರುಕುಳ ನೀಡದಂತೆ ನೋಡಿಕೊಳ್ಳಲಾಗುವುದು ಮತ್ತು ಕಬ್ಬು ಬೆಳೆಗಾರರಿಂದ ಯಾವುದೇ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು, ಅನಧಿಕೃತವಾಗಿ ಕಬ್ಬು ಅರೆಯುತ್ತಿದ್ದರೆ ಬೆಲ್ಲ ಘಟಕಗಳನ್ನು ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೂ. 249 ಕೋಟಿ ಸಾಲವಿದ್ದು, 2 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಿರುವುದರಿಂದ ಆದ್ಯತೆಯ ಮೇಲೆ ಸಾಲದ ಹೊರೆ ಕಡಿಮೆಯಾಗುವಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT