ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 
ರಾಜ್ಯ

ಬೆಂಗಳೂರು: ಉದ್ಯಾನವನ, ರಸ್ತೆ ವಿಭಜಕ, ವೃತ್ತಗಳ ದತ್ತು ಪಡೆಯಲು BBMP ಅವಕಾಶ!

ಬಿಬಿಎಂಪಿ ವ್ಯಾಪ್ತಿಯಲ್ಲಿ ‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆಯಡಿಯಲ್ಲಿ ಸಿಎಸ್‌ಆರ್ ನೀತಿ ಹಾಗೂ ದತ್ತು ಅಡಿಯಲ್ಲಿ ಉದ್ಯಾನ, ರಸ್ತೆ ವಿಭಜಕ ಮತ್ತು ವೃತ್ತಗಳನ್ನು ಆಸಕ್ತ ಖಾಸಗಿ ವ್ಯಕ್ತಿಗಳು ಅಥವಾ ಸಂಘ-ಸಂಸ್ಥೆಗಳಿಗೆ ದತ್ತು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ‘ನಮ್ಮ ಬೆಂಗಳೂರು ನಮ್ಮ ಕೊಡುಗೆ’ ಯೋಜನೆಯಡಿಯಲ್ಲಿ ಸಿಎಸ್‌ಆರ್ ನೀತಿ ಹಾಗೂ ದತ್ತು ಅಡಿಯಲ್ಲಿ ಉದ್ಯಾನ, ರಸ್ತೆ ವಿಭಜಕ ಮತ್ತು ವೃತ್ತಗಳನ್ನು ಆಸಕ್ತ ಖಾಸಗಿ ವ್ಯಕ್ತಿಗಳು ಅಥವಾ ಸಂಘ-ಸಂಸ್ಥೆಗಳಿಗೆ ದತ್ತು ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ 1,270 ಉದ್ಯಾನಗಳಿವೆ. ಇವುಗಳನ್ನು ಪಾಲಿಕೆ ವತಿಯಿಂದ ನಿರ್ವಹಣೆ ಮಾಡಲಾಗುತ್ತಿದ್ದು, ವೃತ್ತ ಮತ್ತು ಮೀಡಿಯನ್ಸ್‌ಗಳನ್ನು ಕೂಡ ನಿರ್ವಹಿಸಲಾಗುತ್ತಿದೆ. ಇತ್ತೀಚೆಗೆ ಹಲವು ನಾಗರಿಕರ ಸಂಘಟನೆಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಪಾಲಿಕೆಯನ್ನು ಸಂರ್ಪಕಿಸಿ ದತ್ತು ಸ್ವೀಕರಿಸಲು ಆಸಕ್ತಿ ವ್ಯಕ್ತಪಡಿಸಿದ್ದವು.

ಇಂತಹ ಸಂಸ್ಥೆಗಳಿಗೆ ಸಿಐಪಿಸಿ 2024, ಸಿಎಸ್‌ಆರ್ ಅಡಿಯಲ್ಲಿ ಹಾಗೂ ನಮ್ಮ ಬೆಂಗಳೂರು– ನನ್ನ ಕೊಡುಗೆ ಯೋಜನೆ ಅಡಿಯಲ್ಲಿ ದತ್ತು ಪಡೆಯಲು ಒಪ್ಪಿಗೆ ನೀಡಲಾಗಿದೆ.

ದತ್ತು ಸ್ವೀಕಾರ ಯೋಜನೆಯಡಿಯಲ್ಲಿ ಜೂ.16ರಿಂದ ಪಾಲಿಕೆಯ ಅಧಿಕೃತ ವೆಬ್ಸೈಟ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ದತ್ತು ಪಡೆಯಲು ಷರತ್ತುಗಳ ವಿವರವನ್ನು ವೆಬ್ಸೈಟ್‌ನಲ್ಲಿಯೇ ವೀಕ್ಷಿಸಬಹುದಾಗಿದೆ. ಜೂ.29ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರು, ತೋಟಗಾರಿಕೆ ಕಚೇರಿ, ಅನೆಕ್ಸ್- 3 ಕಟ್ಟಡ ನೆಲಮಹಡಿ, ಕೊಠಡಿ ಸಂಖ್ಯೆ 9, ಬಿಬಿಎಂಪಿ ಕೇಂದ್ರ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ: 9535015189ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಪಾಲಿಕೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT