ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್  
ರಾಜ್ಯ

ಕಸದಿಂದ ವಿದ್ಯುತ್‌ ಉತ್ಪಾದನೆ ಘಟಕ: ಕಾಮಗಾರಿ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಬೆಂಗಳೂರು: ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ಬಿಡದಿಯಲ್ಲಿ ಸ್ಥಾಪಿಸುತ್ತಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಪ್ರಾಯೋಗಿಕ ಚಾಲನೆಗೆ ಶೀಘ್ರವೆ ಸಿದ್ಧತೆ ನಡೆಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು. ನಗರದಲ್ಲಿನ ಅತಿಯಾದ ಕಸದ ಸಮಸ್ಯೆಯನ್ನು ಪರಿಹರಿಸುವ ಗುರಿಯನ್ನು ಘಟಕ ಹೊಂದಿದೆ.

ಈ ಘಟಕವನ್ನು 10 ಎಕರೆಯಲ್ಲಿ ಸ್ಥಾಪಿಸಲಾಗಿದ್ದು, ಒಟ್ಟು 260 ಕೋಟಿ ರು. ವೆಚ್ಚವಾಗುತ್ತಿದೆ. ಪ್ರತಿನಿತ್ಯ 11.5 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ. ಪಾಲಿಕೆಯ ಸಂಸ್ಕರಣಾ ಘಟಕಗಳು, ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಲ್ಲಿ ಸಂಗ್ರಹವಾಗುವ ಆರ್‌ಡಿಎಫ್ ಅನ್ನು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ರವಾನಿಸಲಾಗುತ್ತದೆ ಎಂದು ಹೇಳಿದರು. ಬೊಮ್ಮನಹಳ್ಳಿ ವಲಯ ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಸರ್ವೆ ನಂ.39ರಲ್ಲಿ ಲೋಕೋಪಯೋಗಿ ಇಲಾಖೆ ಒಡೆತನದ ಸುಮಾರು 170 ಎಕರೆ ಜಾಗವಿದೆ. ಅಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಯನ್ನು ಸ್ಥಾಪಿಸಲು ಸ್ಥಳ ಪರಿಶೀಲನೆ ನಡೆಸಿದರು. ತ್ಯಾಜ್ಯದಿಂದ ವಿದ್ಯುತ್ ಸ್ಥಾವರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷಗಳ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು, Video!

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

ಪ್ರವಾಹದಿಂದಾಗಿ ಮಣಿಮಹೇಶ್ ಯಾತ್ರೆಯ 16 ಭಕ್ತರು ಸಾವು: ಹಿಮಾಚಲ ವಿಪತ್ತು ಪೀಡಿತ ರಾಜ್ಯ; ಸಿಎಂ ಸುಖು ಘೋಷಣೆ!

SCROLL FOR NEXT