ನಟಿ ರಮ್ಯಾ 
ರಾಜ್ಯ

'ಯಾರೂ ಜನರನ್ನು ಕೊಲ್ಲಲು ಹೋಗುವುದಿಲ್ಲ': ನಟ ದರ್ಶನ್ ಬಂಧನದ ಬಗ್ಗೆ ನಟಿ ರಮ್ಯಾ; ಪೊಲೀಸರ ಕೆಲಸಕ್ಕೆ ಮೆಚ್ಚುಗೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರನ್ನು ಬಂಧಿಸಿರುವುದು ಕನ್ನಡ ಚಿತ್ರರಂಗದ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಚರಂಡಿಯಲ್ಲಿ 33 ವರ್ಷದ ರೇಣುಕಾ ಸ್ವಾಮಿ ಎಂಬುವವರ ಶವ ಪತ್ತೆಯಾದ ಬಳಿಕ ದರ್ಶನ್ ಸೇರಿದಂತೆ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಬಂಧನಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ರಾಜಕಾರಣಿ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿರುವ ರಮ್ಯಾ, 'ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಯಾರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು. ಯಾವುದೇ ಕಾರಣಕ್ಕೂ ನೀವು ಜನರನ್ನು ಹೊಡೆಯಲು ಅಥವಾ ಕೊಲ್ಲಲು ಮುಂದಾಗಬೇಡಿ. ನ್ಯಾಯ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ನಿಮಗೆ ಗೊಂದಲವಿದ್ದರೂ ಕೂಡ ಒಂದು ದೂರು ನೀಡಿದರೆ ಸಾಕು' ಎಂದಿದ್ದಾರೆ.

ಅದೇ ಪೋಸ್ಟ್‌ನಲ್ಲಿ, ಅವರು ಕರ್ನಾಟಕ ಪೊಲೀಸ್ ಅಧಿಕಾರಿಗಳ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. 'ಪೊಲೀಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ಮತ್ತು ಗೌರವದ ಮಾತು. ಇದು ಕೃತಜ್ಞತೆಯಿಲ್ಲದ ಕೆಲಸ ಮತ್ತು ಅವರು ತಮ್ಮ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತಿದ್ದಾರೆ. ಅವರು ರಾಜಕೀಯ ಪಕ್ಷಗಳ ಒತ್ತಡಕ್ಕೆ ಮಣಿಯುವುದಿಲ್ಲ ಮತ್ತು ಕಾನೂನು ಮತ್ತು ಮತ್ತು ನ್ಯಾಯದಲ್ಲಿ ಜನರು ನಂಬಿಕೆ ಇಡುವಂತೆ ಮಾಡುತ್ತಿದ್ದಾರೆ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ' ಎಂದಿದ್ದಾರೆ.

#JusticeforRenukaswamy #Darshan #Yedyurappa #PrajwalRevanna' ಎಂದು ನಟಿ ಪೋಸ್ಟ್ ಅನ್ನು ಕೊನೆಗೊಳಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿರುವ ಬಗ್ಗೆ ನಟಿ ಎಕ್ಸ್‌ನಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT