ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ, ಮಗು ಸೇರಿ ಮೂವರ ದುರ್ಮರಣ; ಐವರಿಗೆ ಗಂಭೀರ ಗಾಯ

ನ್ಯಾಷನಲ್​ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಎರಡು ವರ್ಷದ ಮದು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗ: ನ್ಯಾಷನಲ್​ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಎರಡು ವರ್ಷದ ಮದು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರಿನ ತಣಿಸಂದ್ರ ಮೂಲದ ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ಮೋಹನ್ (2) ಮೃತ ದುರ್ದೈವಿಗಳು. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಅತಿ ವೇಗದಲ್ಲಿ ಬಂದ ಲಾರಿ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದವರು ಒಂದೇ ಕುಟುಂಬಕ್ಕೆ ಸೇರಿದವರು ಇರಬೇಕು ಎಂದು ಸ್ಥಳೀಯರು ಅಂದಾಜಿಸಿದ್ದಾರೆ. ಶನಿವಾರವಾಗಿದ್ದ ಕಾರಣ ಮುಂಜಾನೆ ತಮ್ಮ ಪ್ರಯಾಣ ಆರಂಭಿಸಿರಬಹುದು ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT