ಸಾಂದರ್ಭಿಕ ಚಿತ್ರ 
ರಾಜ್ಯ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ಹಿಂಪಡೆಯುವಂತೆ ಆಗ್ರಹ, ಜೂನ್ 17 ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಮೊದಲನೆಯದಾಗಿ, ರಾಜ್ಯದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಗ್ಯಾರಂಟಿಗಳ ಕಾರಣದಿಂದಾಗಿ ಅವರು ಸರ್ಕಾರವನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 3 ರೂ. ಮತ್ತು ಡೀಸೆಲ್‌ ಬೆಲೆಯನ್ನು ರೂ. 3.50 ರಷ್ಟು ಹೆಚ್ಚಿಸಲು ನಿರ್ಧಾರ ಕೈಗೊಂಡಿದೆ. ಇದನ್ನು ಹಿಂಪಡೆಯಬೇಕು ಎಂಬುದು ಬಿಜೆಪಿಯ ಒತ್ತಾಯವಾಗಿದೆ. ಈ ನಿರ್ಧಾರದ ಬಗ್ಗೆ ಪಕ್ಷ ಸುಮ್ಮನಿರುವುದಿಲ್ಲ. ಸೋಮವಾರ ನಾವು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಮತ್ತು ಬೆಲೆ ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ತಿಳಿಸಿದರು.

ರಾಷ್ಟ್ರ ಮತ್ತು ರಾಜ್ಯದಲ್ಲಿ ಹೀನಾಯ ಸೋಲಿನ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಂಡಿದ್ದು, ರಾಜ್ಯದ ಜನರ ಮೇಲೆ ತಮ್ಮ ಸಿಟ್ಟನ್ನು ಹೊರಹಾಕುತ್ತಿದ್ದಾರೆ. ನೋಂದಣಿ ಶುಲ್ಕ ಕೂಡಾ ಹೆಚ್ಚಿಸಿದ್ದಾರೆ.ಇದರ ಬಗ್ಗೆ ವಿಧಾನಸೌಧ ಹಾಗೂ ಹೊರಗಡೆ ಚರ್ಚೆ ನಡೆಸಿದ್ದೇವೆ. ವಿದ್ಯುತ್ ದರ ಕೂಡಾ ಹೆಚ್ಚಳ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಸಾಧ್ಯವಾಗದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಈ ಮೂಲಕ ರಾಜ್ಯ ಜನತೆಯನ್ನು ಶಿಕ್ಷಿಸುತ್ತಿದೆ. ಒಂದು ಕಡೆ ಲೋಕಸಭಾ ಚುನಾವಣೆಯ ಸೋಲಿನ ಹತಾಶೆ ಮತ್ತೊಂದೆಡೆ ರಾಜ್ಯದ ಆರ್ಥಿಕತೆ ನಾಶವಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

ಕಾಂಗ್ರೆಸ್ ಸರ್ಕಾರ ಹಠಮಾರಿಯಾಗಿದೆ. ಆರ್ಥಿಕತೆ ಸದೃಢವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಕ್ರಮವು ರಾಜ್ಯದ ಪರಿಸ್ಥಿತಿ ಹದಗೆಟ್ಟಿದೆ ಎಂದು ತೋರಿಸುತ್ತದೆ. ಸರ್ಕಾರಕ್ಕೆ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ ಮತ್ತು ಇಂಧನ ಬೆಲೆಯನ್ನು ಹೆಚ್ಚಿಸಿದೆ ಎಂದು ಅವರು ಟೀಕಿಸಿದರು.

“ರಾಜ್ಯದಲ್ಲಿ ಬರಗಾಲವಿದೆ ಮತ್ತು ಈ ಬಿಕ್ಕಟ್ಟಿನ ಅವಧಿಯಲ್ಲಿ ಇಂಧನ ಬೆಲೆಗಳನ್ನು ಹೆಚ್ಚಿಸುವ ನಿರ್ಧಾರವು ಅಕ್ಷಮ್ಯ ಅಪರಾಧವಾಗಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ತಮ್ಮ ಅಹಂಕಾರವನ್ನು ಬದಿಗಿಟ್ಟು ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT