ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ online desk
ರಾಜ್ಯ

ತಪ್ಪಾಗಿ ಅರ್ಥೈಸಲಾಗಿದೆ: ಗುಜರಾತ್ ನಲ್ಲಿ ಸೆಮಿಕಂಡಕ್ಟರ್ ಉದ್ಯಮಕ್ಕೆ ನೀಡುವ ಸಬ್ಸಿಡಿ ಪ್ರಶ್ನಿಸಿದ್ದರ ಬಗ್ಗೆ HDK ಪ್ರತಿಕ್ರಿಯೆ

ಅಮೇರಿಕಾದ ಸೆಮಿಕಂಡಕ್ಟರ್ ಸಂಸ್ಥೆ ಮೈಕ್ರೋನ್ ಗೆ ಸಹಾಯಧನ ನೀಡುವುದನ್ನು ಪ್ರಶ್ನಿಸಿದ್ದ ಕೇಂದ್ರ ಬೃಹತ್ ಕೈಗಾರಿಕೆ, ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ, ಈ ವಿಷಯದಲ್ಲಿ ತಮ್ಮ ಹೇಳಿಕೆಯನ್ನು ಬದಲಾವಣೆ ಮಾಡಿದ್ದಾರೆ.

ಬೆಂಗಳೂರು: ಅಮೇರಿಕಾದ ಸೆಮಿಕಂಡಕ್ಟರ್ ಸಂಸ್ಥೆ ಮೈಕ್ರೋನ್ ಗೆ ಸಹಾಯಧನ ನೀಡುವುದನ್ನು ಪ್ರಶ್ನಿಸಿದ್ದ ಕೇಂದ್ರ ಬೃಹತ್ ಕೈಗಾರಿಕೆ, ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ, ಈ ವಿಷಯದಲ್ಲಿ ತಮ್ಮ ಹೇಳಿಕೆಯನ್ನು ಬದಲಾವಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಸೆಮಿಕಂಡಕ್ಟರ್ ಕಾರ್ಯತಂತ್ರದ ಉದ್ಯಮವಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಆಟೋಮೊಬೈಲ್ ಉತ್ಪಾದನೆಗೆ ಇದು ಮೂಲಭೂತ ಅವಶ್ಯಕತೆಯಾಗಿದೆ. ಈ ಎರಡೂ ಕ್ಷೇತ್ರಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಪ್ರಧಾನಿ ಕೈಗೊಂಡಿರುವ ಸೆಮಿಕಂಡಕ್ಟರ್ ಸಂಬಂಧಿತ ಉಪಕ್ರಮಗಳನ್ನು ನಾನು ಬಹಳವಾಗಿ ಪ್ರಶಂಸಿಸುತ್ತೇನೆ ಮತ್ತು ನನ್ನ ಸಚಿವಾಲಯದ ಮೂಲಕ ಅವುಗಳನ್ನು ಪೂರೈಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಜೂನ್ 14 ರಂದು ಪ್ರಕಟವಾದ ಮಾಧ್ಯಮ ವರದಿಯ ಪ್ರಕಾರ, ಅವರು ಗುಜರಾತ್‌ನಲ್ಲಿ US-ಮೂಲದ ಮೈಕ್ರಾನ್ ಟೆಕ್ನಾಲಜಿಯಿಂದ $ 2.5 ಶತಕೋಟಿ ಸೆಮಿಕಂಡಕ್ಟರ್ ಘಟಕದಂತಹ ಹೂಡಿಕೆಗೆ ಸಂಬಂಧಿಸಿದ ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದ್ದರು, ಈ ಯೋಜನೆ ಪ್ರತಿ ಉದ್ಯೋಗಕ್ಕೆ 3.2 ಕೋಟಿ ರೂಪಾಯಿಗಳ ಸಬ್ಸಿಡಿಗಳನ್ನು ಪಡೆಯುವ ಸಾಧ್ಯತೆ ಇದೆ ಈ ಸಬ್ಸಿಡಿಯ ಬಗ್ಗೆ ಕುಮಾರಸ್ವಾಮಿ ಪ್ರಶ್ನಿಸಿದ್ದರು.

ಮೈಕ್ರಾನ್‌ ಟೆಕ್ನಾಲಜಿ ಗುಜರಾತ್‌ನಲ್ಲಿ ₹22,976 ಕೋಟಿ (2.75 ಬಿಲಿಯನ್‌ ಡಾಲರ್) ಹೂಡಿಕೆ ಮಾಡುತ್ತಿದೆ. ಅದಕ್ಕೆ ಕೇಂದ್ರ (ಶೇ 50) ಹಾಗೂ ರಾಜ್ಯ ಸರ್ಕಾರ ನೀಡುತ್ತಿರುವ ಸಹಾಯಧನ ಶೇ 70ರಷ್ಟಿದೆ. ಕಂಪನಿ 5 ಸಾವಿರ ಉದ್ಯೋಗ ನೀಡುವ ಭರವಸೆ ನೀಡಿದೆ. ದೊರೆಯಲಿರುವ ಉದ್ಯೋಗ, ನೀಡುವ ಸಹಾಯಧನ ಲೆಕ್ಕ ಹಾಕಿದರೆ ಪ್ರತಿ ಉದ್ಯೋಗಕ್ಕೆ ₹3.2 ಕೋಟಿ‌ ವೆಚ್ಚವಾಗುತ್ತದೆ. ಒಂದು ಉದ್ಯೋಗಕ್ಕೆ ಅಷ್ಟು ಹಣ ನೀಡುವುದು ಸರಿಯೇ? ಎಂದು ಸಭೆಯಲ್ಲೇ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದೆ ಎಂದು ಹೆಚ್ ಡಿಕೆ ಹೇಳಿದ್ದರು.

ಆದರೆ ಈಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ HDK ಮಾಧ್ಯಮಗಳು ತಮ್ಮ ಹೇಳಿಕೆಯನ್ನು ಸರಿಯಾಗಿ ಗ್ರಹಿಸಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ