ಹೈಕೋರ್ಟ್ 
ರಾಜ್ಯ

ಸಾರ್ವಜನಿಕ ಶೌಚಾಲಯದ ಗೋಡೆಯ ಮೇಲೆ ನಂಬರ್ ಹಾಕಿ 'ಕಾಲ್ ಗರ್ಲ್' ಬರಹ: ಮಹಿಳೆಯ ಘನತೆಗೆ ಕುಂದು; High court

ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆಯೊಬ್ಬರ ಮೊಬೈಲ್ ಸಂಖ್ಯೆಯೊಂದಿಗೆ ಕಾಲ್ ಗರ್ಲ್ ಎಂಬುದಾಗಿ ಬರೆಯುವುದು ಆ ಮಹಿಳೆಯ ಘನತೆ ಕುಗ್ಗಿಸಿದ್ದಲ್ಲದೇ, ಮಾನಸಿಕ ಹಿಂಸೆ ನೀಡಿದಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಬೆಂಗಳೂರು: ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆಯೊಬ್ಬರ ಮೊಬೈಲ್ ಸಂಖ್ಯೆಯೊಂದಿಗೆ ಕಾಲ್ ಗರ್ಲ್ ಎಂಬುದಾಗಿ ಬರೆಯುವುದು ಆ ಮಹಿಳೆಯ ಘನತೆ ಕುಗ್ಗಿಸಿದ್ದಲ್ಲದೇ, ಮಾನಸಿಕ ಹಿಂಸೆ ನೀಡಿದಂತೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ರೀತಿಯ ಕೃತ್ಯದಲ್ಲಿ ತೊಡಗಿದ್ದ ಆರೋಪಿಯ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

ತಮ್ಮ ವಿರುದ್ಧ ಉಪ್ಪಾರಪೇಟೆ ಪೊಲೀಸರು ದಾಖಲಿಸಿದ್ದ ಪ್ರಕರಣದ ಮತ್ತದರ ಕುರಿತ ವಿಚಾರಣೆ ರದ್ದು ಕೋರಿ ಚಿತ್ರದುರ್ಗದ ನಿವಾಸಿ ಅಲ್ಲ ಬಕಾಶ್ ಪಾಟೀಲ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ, ಅರ್ಜಿದಾರರ ವಿರುದ್ಧದ ಆರೋಪಪಟ್ಟಿ ರದ್ದುಪಡಿಸಲು ನಿರಾಕರಿಸಿದೆ. ಮಹಿಳೆಯ ಗೌಪ್ಯತೆಯನ್ನು ಬಹಿರಂಗಪಡಿಸುವುದು ಆಕೆಗೆ ವೈಯಕ್ತಿಕವಾಗಿ ಗಂಭೀರ ಮಾನಸಿಕ ಹಾನಿ ಉಂಟುಮಾಡುತ್ತದೆ. ಅಲ್ಲದೆ, ಮಹಿಳೆಯ ಆತ್ಮಕ್ಕೆ ಬಲವಾದ ಗಾಯ ಮಾಡುತ್ತದೆ. ಇದು ದೈಹಿಕ ಹಾನಿಗಿಂತಲೂ ಹೆಚ್ಚಿನ ನೋವು ನೀಡುತ್ತದೆ. ಮಹಿಳೆಯ ವಿರುದ್ಧ ಇಂಥ ಕೃತ್ಯಗಳಲ್ಲಿ ಭಾಗಿಯಾಗುವುದು ಆಘಾತಕಾರಿ ಅನುಭವಕ್ಕೆ ಒಳಗಾಗುವಂತೆ ಮಾಡುತ್ತದೆ ಎಂದು ಪೀಠ ಅಭಿಪ್ರಾಯಪಟ್ಟಿತು.

ಅರ್ಜಿದಾರರು ಮಾಡಿರುವ ಕೃತ್ಯ, ಮಹಿಳೆಯ ಕುರಿತು ಅಸಭ್ಯವಾಗಿ ಬರೆದು, ಸಾರ್ವಜನಿಕರು ಕರೆ ಮಾಡಿ ಅಸಭ್ಯವಾಗಿ ಮಾತನಾಡಲು ಪ್ರಚೋದನಕಾರಿಯಾಗಿಸುವ ಮೂಲಕ ಆಕೆಯ ಘನತೆಯನ್ನು ಕುಗ್ಗಿಸುವಂತೆ ಮಾಡುತ್ತದೆ. ಪ್ರಸ್ತುತ ಡಿಜಿಟಲ್ ಯುಗದಲ್ಲಿ ದೈಹಿಕವಾಗಿ ಹಾನಿಯುಂಟು ಮಾಡಬೇಕಾದ ಅಗತ್ಯವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆಗಳು, ಚಿತ್ರಗಳು ಅಥವಾ ವಿಡಿಯೋಗಳನ್ನು ಪ್ರಸಾರ ಮಾಡುವ ಮೂಲಕ ಮಹಿಳೆಯ ಘನತೆಗೆ ಧಕ್ಕೆಯಾಗುವಂತೆ ಮಾಡಬಹುದಾಗಿದೆ. ಆದ್ದರಿಂದ ಅಂತಹ ಪ್ರಕರಣಗಳಲ್ಲಿ ಆರೋಪಿಗಳು ಪ್ರಕರಣ ರದ್ದು ಕೋರಿ ನ್ಯಾಯಾಲಯದ ಮುಂದೆ ಬಂದಲ್ಲಿ, ನ್ಯಾಯಾಲಯ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಪೀಠ ಹೇಳಿದೆ.

ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಅತ್ಯಂತ ಅಮಾನವೀಯ ಕೃತ್ಯ. ಆದರೆ, ಪ್ರಸ್ತುತ ಪ್ರಕರಣದಲ್ಲಿ ಮಹಿಳೆಯ ಖಾಸಗಿತನದ ಹಕ್ಕಿನ ಮೇಲೆ ಅತಿಕ್ರಮಣವಾಗಿದೆ. ಈ ರೀತಿಯ ಕೃತ್ಯ ಸಮರ್ಥನೆ ಮಾಡುವಂಥದ್ದಲ್ಲ. ಈ ಪ್ರಕರಣಗಳನ್ನು ಕಠಿಣವಾಗಿ ಪರಿಗಣಿಸಬೇಕು. ಅರ್ಜಿದಾರರ ಕೃತ್ಯ, ಸಾರ್ವಜನಿಕವಾಗಿ ಮಹಿಳೆಯ ಕುರಿತು ಕೀಳು ಮಟ್ಟದ ಟೀಕೆಗಳು ಮಾಡುವ ಅವಮಾನಿಸಲು ಕಾರಣರಾಗಿದ್ದಾರೆ. ಈ ರೀತಿಯ ಆರೋಪದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.

ಜೊತೆಗೆ, ಸಂತ್ರಸ್ತೆಯ ಮೊಬೈಲ್ ಸಂಖ್ಯೆಗಳನ್ನು ಆರೋಪಿಗೆ ನೀಡಿರುವ ಮತ್ತೋರ್ವ ಮಹಿಳೆಯನ್ನು ಆರೋಪಿಯನ್ನಾಗಿಸಿ, ವಿಚಾರಣೆಗೊಳಪಡಿಸಲು ತನಿಖಾಧಿಕಾರಿಗಳು ಮುಕ್ತರಾಗಿದ್ದಾರೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.

ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ ಕಿರಿಯ ಆರೋಗ್ಯ ಸಹಾಯಕಿಯಾಗಿರುವ ವಿವಾಹಿತ ಮಹಿಳೆಯ ಮೊಬೈಲ್ ಸಂಖ್ಯೆಗೆ ಅನಾಮಿಕರಿಂದ ಅನಿರೀಕ್ಷಿತ ಸಮಯದಲ್ಲಿ ಕರೆಗಳು ಬರಲಾರಂಭಿಸಿದ್ದವು. ಜೀವ ಬೆದರಿಕೆ ಹಾಕಲಾಗುತ್ತಿತ್ತು. ಈ ಕರೆಗಳ ಕುರಿತು ಪರಿಶೀಲಿಸಿದಾಗ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಪುರುಷರ ಶೌಚಾಲಯದ ಗೋಡೆಗಳ ಮೇಲೆ 'ಬೆಲೆವೆಣ್ಣು' ಸಂಪರ್ಕಿಸಬಹುದು ಎಂಬುದಾಗಿ ಬರೆದಿರುವುದಾಗಿ ಗೊತ್ತಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT