ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ 
ರಾಜ್ಯ

ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ; ರೌಡಿಶೀಟರ್‌ ಸ್ಥಳದಲ್ಲೇ ಸಾವು

ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳ ದಾಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಕೊಲೆಯಾಗಿದೆ.

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು ದುಷ್ಕರ್ಮಿಗಳ ದಾಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಕೊಲೆಯಾಗಿದೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ರೌಡಿಶೀಟರ್‌ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾರೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮನೆ ಬಳಿ ಇದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ (Shootout Case) ನಡೆಸಿ ರೌಡಿಶೀಟರ್‌ನ ಕೊಲ್ಲಲಾಗಿದೆ. ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ಹಂತಕರು ದಾಳಿ ಮಾಡಿದ್ದಾರೆ. ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ ಮೃತ ಅಶೋಕ ಮಲ್ಲಪ್ಪ ಗಂಟಗಲ್ಲಿ ಕೂಡ ಸ್ಥಳೀಯವಾಗಿ ನಟೋರಿಯಸ್ ಆಗಿದ್ದ. ಕೊಲೆ ಹಾಗೂ ಇತರೆ ಕೇಸ್‌ಗಳಲ್ಲಿ ಅಪರಾಧಿಯಾಗಿದ್ದ. ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರಬಂದಿದ್ದ ಈತನನ್ನು ಹಳೆ ದ್ವೇಷದಿಂದ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಕೊಲೆಗೀಡಾದ ಅಶೋಕ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್ 2ರ ಬಿಜೆಪಿ ಸದಸ್ಯೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಚಡಚಣ ಪೊಲೀಸರ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!