ಸಿಎಂ ಸಿದ್ದರಾಮಯ್ಯ online desk
ರಾಜ್ಯ

ಕರ್ನಾಟಕಕ್ಕೆ ಅನ್ಯಾಯ ಮಾಡಿರುವುದು ಮೋದಿ ಸರ್ಕಾರ, ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲು ರಾಜ್ಯ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿಯವರು ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕರ್ನಾಟಕ ಸರ್ಕಾರ ಶನಿವಾರದಂದು ಮಾರಾಟ ತೆರಿಗೆಯನ್ನು ಹೆಚ್ಚಿಸಲು ನಿರ್ಧರಿಸಿದ ನಂತರ ಪೆಟ್ರೋಲ್ ಬೆಲೆ ಲೀಟರ್‌ಗೆ ಮೂರು ಮತ್ತು ಡೀಸೆಲ್ ಲೀಟರ್‌ಗೆ 3.5 ರೂ.ಗಳಷ್ಟು ಏರಿಕೆಯಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಕೇಂದ್ರದ ಹಣ ಮತ್ತು ಜಿಎಸ್‌ಟಿ ಹಂಚಿಕೆ ಮತ್ತು ರಾಜ್ಯ ಯೋಜನೆಗಳಿಗೆ ಹಣ ಬಿಡುಗಡೆಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜ್ಯ ಅನ್ಯಾಯವನ್ನು ಎದುರಿಸುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು ಮತ್ತು ಈ ಬಗ್ಗೆ ಪ್ರತಿಭಟನೆ ನಡೆಸುವ ಧೈರ್ಯವನ್ನು ಬಿಜೆಪಿ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಒಂದು ಹಂತದಲ್ಲಿ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ USD 113 ರಷ್ಟಿತ್ತು ಆದರೆ ಪ್ರಸ್ತುತ ಅದು USD 82.35 ರಷ್ಟಿದೆ ಎಂದು ಸಿದ್ದರಾಮಯ್ಯ ಹೇಳಿದರು.

2015 ರಲ್ಲಿ, ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ USD 52 ಆಗಿತ್ತು, ಇದು ಮುಂದಿನ ವರ್ಷದಲ್ಲಿ ಮತ್ತಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಯಿತು ಆದರೆ ಪೆಟ್ರೋಲ್ ಬೆಲೆ ಏರಿತು. ಹಾಗಾದರೆ ಬಿಜೆಪಿ ನಾಯಕರ ಹೋರಾಟ ಯಾರ ವಿರುದ್ಧ? ಸಿದ್ದರಾಮಯ್ಯ ಕೇಳಿದರು.

ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ರೀಫಿಲ್ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 410 ರೂಪಾಯಿ ಇತ್ತು. ಎನ್‌ಡಿಎ ಆಡಳಿತದಲ್ಲಿ ಇದು 1,000 ರೂ.ಗೆ ಏರಿತು. ಈಗ ಬೆಲೆ ಇಳಿಸಿದ ನಂತರವೂ ಸಿಲೆಂಡರ್ ದರ 805.50 ರೂ ಇದೆ ಎಂದು ಸಿಎಂ ಹೇಳಿದ್ದಾರೆ

ಕಚ್ಚಾ ತೈಲ ಬೆಲೆ ಇಳಿಕೆಯ ಹೊರತಾಗಿಯೂ ರೀಫಿಲ್ ಗ್ಯಾಸ್ ಸಿಲಿಂಡರ್ ಅನ್ನು ರೂ 410 ರಿಂದ ರೂ 805.50 ಕ್ಕೆ ಹೆಚ್ಚಿಸಿದವರು ಯಾರು? ಅವರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಿಎಸ್‌ಟಿಯನ್ನು ಪರಿಚಯಿಸಿದ ನಂತರ, ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್, ಮದ್ಯ, ಮುದ್ರಾಂಕ ಶುಲ್ಕ ಮತ್ತು ಮೋಟಾರು ತೆರಿಗೆಗಳನ್ನು ಹೊರತುಪಡಿಸಿ ತೆರಿಗೆಗಳನ್ನು ಹೆಚ್ಚಿಸುವ "ಅಧಿಕಾರವನ್ನು ಕಳೆದುಕೊಂಡಿತು" ಎಂದು ಮುಖ್ಯಮಂತ್ರಿ ಇದೇ ವೇಳೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಜಿಎಸ್‌ಟಿ, ಆದಾಯ ತೆರಿಗೆ, ಕಾರ್ಪೊರೇಟ್ ತೆರಿಗೆ ಮತ್ತು ಅಬಕಾರಿ ಸುಂಕವನ್ನು ಸಂಗ್ರಹಿಸಿದೆ ಆದರೆ ರಾಜ್ಯ ಸರ್ಕಾರ ಮಾರಾಟ ತೆರಿಗೆಯನ್ನು ವಿಧಿಸಬಹುದು ಮತ್ತು ಮದ್ಯದ ಬೆಲೆಗಳನ್ನು ಮಾತ್ರ ನಿಗದಿಪಡಿಸಬಹುದು.

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಕರ್ನಾಟಕ 14 ಮತ್ತು 15 ನೇ ಹಣಕಾಸು ಆಯೋಗದಲ್ಲಿ 1.87 ಲಕ್ಷ ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದೆ. ನಮ್ಮ ಆದಾಯ ಮತ್ತು ರಾಜ್ಯಕ್ಕೆ ಕೇಂದ್ರದ ಕೊಡುಗೆ ಕಡಿಮೆಯಾಗಿದೆ. ಹಿಂದಿನ ಲೋಕಸಭೆಯಲ್ಲಿ 25 ಮಂದಿಯಿದ್ದರೂ ಬಿಜೆಪಿಯ ಯಾವ ಸಂಸದರೂ ಸಂಸತ್ತಿನಲ್ಲಿ ಮಾತನಾಡಲಿಲ್ಲ. ರಾಜ್ಯದ ಜಿಎಸ್‌ಟಿ ಹಂಚಿಕೆಯಲ್ಲಿ ಇಳಿಕೆಯಾಗಿದೆ ಎಂದು 15ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ 5,495 ಕೋಟಿ ರೂ.ಗಳನ್ನು ನೀಡುವಂತೆ ಶಿಫಾರಸು ಮಾಡಿದ್ದರೂ ಕೇಂದ್ರ ನೀಡಿಲ್ಲ. ಆದರೆ, ರಾಜ್ಯ ಬಿಜೆಪಿ ಈ ಬಗ್ಗೆ ಚಕಾರ ಎತ್ತಲಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬೆಂಗಳೂರಿನ ಪೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ ರೂಪಾಯಿ ನೀಡುವುದಾಗಿ ಕೇಂದ್ರ ಘೋಷಿಸಿದೆ ಆದರೆ ಅದು ಏನನ್ನೂ ನೀಡಲಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು. ಬೆಂಗಳೂರಿನ ಕೆರೆ ಅಭಿವೃದ್ಧಿಗೆ 3 ಸಾವಿರ ಕೋಟಿ ರೂಪಾಯಿ ನೀಡಿಲ್ಲ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳನ್ನು ಘೋಷಿಸಿದೆ, ಅವರು ನೀಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

'ಇಂದು ಬಿಜೆಪಿಯವರು ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಬಡಪಾಯಿ ಎಂದು ಕರೆಯುತ್ತಿದ್ದಾರೆ. ಅವರಿಗೆ ಬಡತನದ ಅರ್ಥ ತಿಳಿದಿದೆಯೇ? ನಾವು ಯಾರೊಬ್ಬರ ಸಂಬಳವನ್ನು ನಿಲ್ಲಿಸಿದ್ದೇವೆಯೇ? ಬಜೆಟ್ ನಲ್ಲಿ ಘೋಷಣೆ ಮಾಡಿದ ಯಾವುದಾದರೂ ಯೋಜನೆಗೆ ಅನುದಾನ ನಿಲ್ಲಿಸಿದ್ದೇವೆಯೇ?' ಎಂದು ಸಿಎಂ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT