ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದಲ್ಲಿ ಭಾನುವಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.  
ರಾಜ್ಯ

ಇಂಧನ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ: ಸಿದ್ದರಾಮಯ್ಯ

ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಗೆ ಪ್ರತೀಕಾರವಾಗಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರ ಆರೋಪವನ್ನು ಸಿದ್ದರಾಮಯ್ಯ ತಳ್ಳಿಹಾಕಿದರು.

ವಿಜಯಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ, ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದಲ್ಲಿ ಭಾನುವಾರ ಮಾಧವಾನಂದ ಸ್ವಾಮಿಗಳ ನೂತನ ದೇಗುಲದ ಉದ್ಘಾಟನೆ ಹಾಗೂ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಗೆ ಪ್ರತೀಕಾರವಾಗಿ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದೆ ಎನ್ನುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಅವರ ಆರೋಪವನ್ನು ತಳ್ಳಿಹಾಕಿದರು.

'ಪ್ರಜಾಪ್ರಭುತ್ವದಲ್ಲಿ ಗೆಲುವು ಮತ್ತು ಸೋಲು ಸಾಮಾನ್ಯ'. ಕರ್ನಾಟಕದಲ್ಲಿ ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಿಲ್ಲ. ಆದರೆ, 2019ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಯು 25 ರಿಂದ 19 ಸ್ಥಾನಕ್ಕೆ ಕುಸಿದಿದೆ. ಕಾಂಗ್ರೆಸ್ ಒಂದು ಸ್ಥಾನದಿಂದ ಒಂಬತ್ತು ಸ್ಥಾನಗಳನ್ನು ಪಡೆದುಕೊಂಡಿದೆ' ಎಂದು ಇಂಧನ ಬೆಲೆ ಏರಿಕೆ ಮೇಲಿನ ಚುನಾವಣಾ ಪರಿಣಾಮಗಳ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯು ಯಾವುದೇ ಚುನಾವಣಾ ಫಲಿತಾಂಶದಿಂದ ಪ್ರಭಾವಿತವಾಗಿಲ್ಲ. ಆದರೆ, ಇತರ ರಾಜ್ಯಗಳಿಗೆ ಹೋಲಿಸಿದರೆ ದರಗಳನ್ನು ಸಮತೋಲನಗೊಳಿಸುವ ಗುರಿಯನ್ನು ಹೊಂದಿದೆ. ವಿಪಕ್ಷದ ಆರೋಪಗಳು ಕೇವಲ ರಾಜಕೀಯ ಪ್ರೇರಿತವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಖಾತರಿ ಯೋಜನೆಗಳನ್ನು ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿದೆಯೇ ಹೊರತು ಚುನಾವಣಾ ತಂತ್ರಗಳಾಗಿ ಅಲ್ಲ. ಅನುದಾನ ಸ್ಥಗಿತದ ಯಾವುದೇ ವದಂತಿಗಳನ್ನು ತಳ್ಳಿಹಾಕಿದ ಅವರು, ಸಾರ್ವಜನಿಕ ಒಳಿತಿಗಾಗಿ ಅವುಗಳ ಮುಂದುವರಿಕೆಯನ್ನು ಪ್ರತಿಪಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT