ಆರೋಪಿ ಅನು ಹಾಗೂ ಆತನ ತಂದೆ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಂದೆ ಅಂತ್ಯಕ್ರಿಯೆಯಲ್ಲಿ ಆರೋಪಿ ಅನುಕುಮಾರ್ ಭಾಗಿ!

ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನುಕುಮಾರ್ ಅವರ ತಂದೆ ಚಂದ್ರಣ್ಣ ಅವರ ಅಂತ್ಯ ಸಂಸ್ಕಾರವನ್ನು ಇಲ್ಲಿನ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಇರುವ ರುದ್ರಭೂಮಿಯಲ್ಲಿ ಶನಿವಾರ ತಡರಾತ್ರಿ ನಡೆಸಲಾಯಿತು.

ಚಿತ್ರದುರ್ಗ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನುಕುಮಾರ್ ಅವರ ತಂದೆ ಚಂದ್ರಣ್ಣ ಅವರ ಅಂತ್ಯ ಸಂಸ್ಕಾರವನ್ನು ಇಲ್ಲಿನ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಇರುವ ರುದ್ರಭೂಮಿಯಲ್ಲಿ ಶನಿವಾರ ತಡರಾತ್ರಿ ನಡೆಸಲಾಯಿತು.

ಕೊಲೆ ಪ್ರಕರಣದ ಏಳನೇ ಆರೋಪಿಯಾಗಿರುವ ಅನುಕುಮಾರ್ ಅಂತ್ಯಕ್ರಿಯೆಗೆ ನ್ಯಾಯಾಲಯದಿಂದ ಅನುಮತಿ ಪಡೆದು ಬಂದ ಕೂಡಲೇ ಬೆಂಗಳೂರು ನಗರ ಪೊಲೀಸರು ಆತನ ಮನೆಗೆ ಕರೆದುಕೊಂಡು ಹೋದರು.

ತಂದೆಯ ಶವವನ್ನು ನೋಡಿದ ಆರೋಪಿ ಅನು ಕುಸಿದು ಬಿದ್ದು ಅಳಲು ಆರಂಭಿಸಿದ್ದು, ಸ್ವಲ್ಪ ಕಾಲ ತಂದೆಯ ಮೃತದೇಹದ ಪಕ್ಕ ಕುಳಿತಿದ್ದನು, ಅನುಕುಮಾರ್ ಸ್ಥಿತಿ ನೋಡಿ ಕುಟುಂಬಸ್ಥರು, ಮುಖ್ಯವಾಗಿ ತಾಯಿ ಜಯಮ್ಮ ಕೂಡ ನಲುಗಿ ಹೋದರು. ಮಗನನ್ನು ತಬ್ಬಿ ಅಳುತ್ತಾ ಅಸಹಾಯಕತೆ ವ್ಯಕ್ತಪಡಿಸಿದರು. ಬಳಿಕ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಕ್ಕೆ ಕೊಂಡೊಯ್ಯಲಾಯಿತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪುತ್ರ ಅನುಕುಮಾರ್ ಬಂಧನದ ಸುದ್ದಿ ಕೇಳಿ ಕೇಳುತ್ತಲೇ ಚಂದ್ರಣ್ಣ ಅವರು ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಹೇಳಿದ್ದರು.

ಈ ನಡುವೆ ಪೊಲೀಸರು ಇತರ ಮೂವರು ಆರೋಪಿಗಳೊಂದಿಗೆ (ರಘು ಅಲಿಯಾಸ್ ರಾಘವೇಂದ್ರ, ಜಗದೀಶ್ ಅಲಿಯಾಸ್ ಜಗ್ಗು ಮತ್ತು ಕಾರು ಚಾಲಕ ರವಿ) ಚಿತ್ರದುರ್ಗಕ್ಕೆ ಭೇಟಿ ನೀಡಿ, ಪೊಲೀಸರು ಸ್ಥಳ ಮಹಜರು ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!