ಸಾಂದರ್ಭಿಕ ಚಿತ್ರ  
ರಾಜ್ಯ

ಬೆಂಗಳೂರು ಏರ್ ಪೋರ್ಟ್: ಲಗೇಜ್ ನಲ್ಲಿ ಬಾಂಬ್ ಇದೆ ಎಂದು ವೃದ್ಧನ ಹುಸಿ ಹೇಳಿಕೆ; ವಿಮಾನ ಹತ್ತಲು ಬಿಡದ ಸಿಬ್ಬಂದಿ

ಉದ್ಯಾನನಗರಿ ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ 81ರ ಹರೆಯದ ಪ್ರಯಾಣಿಕರೊಬ್ಬರು ಮೊನ್ನೆ ಸೋಮವಾರ ವಿಮಾನದಲ್ಲಿ ದಿನನಿತ್ಯದ ತಪಾಸಣೆ ವೇಳೆ ತಮ್ಮ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಏರ್‌ಲೈನ್‌ ಎಕ್ಸಿಕ್ಯೂಟಿವ್‌ಗೆ ಹೇಳಿದಾಗ ವಿಮಾನ ಹತ್ತಲು ಬಿಡಲಿಲ್ಲ.

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ 81ರ ಹರೆಯದ ಪ್ರಯಾಣಿಕರೊಬ್ಬರು ಮೊನ್ನೆ ಸೋಮವಾರ ವಿಮಾನದಲ್ಲಿ ದಿನನಿತ್ಯದ ತಪಾಸಣೆ ವೇಳೆ ತಮ್ಮ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಏರ್‌ಲೈನ್‌ ಎಕ್ಸಿಕ್ಯೂಟಿವ್‌ಗೆ ಹೇಳಿದಾಗ ವಿಮಾನ ಹತ್ತಲು ಬಿಡಲಿಲ್ಲ. ವಿಮಾನ ನಿಲ್ದಾಣದ ಪೊಲೀಸರು ಆತನ ವಯೋವೃದ್ಧರ ವಿರುದ್ಧ ನಾನ್ ಕಾಗ್ನೈಸಬಲ್ ವರದಿಯನ್ನು (NCR) ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಅಂಜನಾಪುರದ ನಿವಾಸಿ ಸಿ ಕೃಷ್ಣರಾಜ್ ಎಂಬವರು ಎಮಿರೇಟ್ಸ್ ಇಕೆ-565 ವಿಮಾನದಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದರು, ಅದು ಟರ್ಮಿನಲ್ 1 ರಿಂದ ಬೆಳಗ್ಗೆ 10.35 ಕ್ಕೆ ಟೇಕ್ ಆಫ್ ಆಗಬೇಕಿತ್ತು.

ಬೆಳಗ್ಗೆ 8.10 ರ ಸುಮಾರಿಗೆ ನಿರ್ಗಮಿಸುವ ವಿಮಾನದಲ್ಲಿ ಪ್ರಯಾಣಿಕರ ಲಗ್ಗೇಜ್ ಗಳನ್ನು ತಪಾಸಣೆ ನಡೆಯುತ್ತಿರುವಾಗ ಈ ಘಟನೆ ನಡೆದಿದೆ. ಸೆಲ್ಫ್ ಬ್ಯಾಗೇಜ್ ಡ್ರಾಪ್ ಕೌಂಟರ್‌ನಲ್ಲಿ, ಏರ್‌ಲೈನ್ ಎಕ್ಸಿಕ್ಯೂಟಿವ್ ತನ್ನ ಬ್ಯಾಗ್‌ನಲ್ಲಿ ಏನಿದೆ ಎಂದು ಕೇಳಿದರು. ಅದಕ್ಕೆ ವೃದ್ಧರು ಸಿಟ್ಟಿನಿಂದ ಬಾಂಬ್ ಇದೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದರು. ಅದು ಇತರ ಪ್ರಯಾಣಿಕರಲ್ಲಿ ಆತಂಕ ಉಂಟುಮಾಡಿತು.

ಏರ್ ಲೈನ್ಸ್ ಎಕ್ಸಿಕ್ಯೂಟಿವ್ ತಕ್ಷಣವೇ ವೃದ್ಧರಿಕೆ ಎಚ್ಚರಿಕೆ ನೀಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯನ್ನು ಕರೆದರು. ನಂತರ ವೃದ್ಧ ಪ್ರಯಾಣಿಕರನ್ನು ವಶಕ್ಕೆ ಪಡೆದು ವ್ಯಕ್ತಿ ಮತ್ತು ಸಾಮಾನುಗಳನ್ನು ತಪಾಸಣೆ ನಡೆಸಲಾಯಿತು. ಇದೊಂದು ಹುಸಿ ಹೇಳಿಕೆ ಎಂದು ನಂತರ ಗೊತ್ತಾಯಿತು.

ವೃದ್ಧ ಪ್ರಯಾಣಿಕ ಕೃಷ್ಣರಾಜ್ ಅವರನ್ನು ವಿಮಾನ ಹತ್ತಲು ಬಿಡಲಿಲ್ಲ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಮತ್ತೊಂದು ಮೂಲ ತಿಳಿಸಿತು.

ಎಮಿರೇಟ್ಸ್‌ನ ಏರ್‌ಪೋರ್ಟ್ ಸರ್ವೀಸಸ್ ಅಧಿಕಾರಿ ನಿರುಪಮಾ ಎಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 505 (1) (B) ಅಡಿಯಲ್ಲಿ ದೂರು ದಾಖಲಿಸಲಾಗಿದೆ, ಇದು ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ ಉದ್ದೇಶದಿಂದ ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧಕ್ಕೆ ಸಂಬಂಧಿಸಿದ ಕೇಸು ಆಗಿದೆ.

ಕಳೆದ ತಿಂಗಳು, ಪುಣೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಭದ್ರತಾ ತಪಾಸಣೆಯ ಸಮಯದಲ್ಲಿ ತನ್ನ ಸಾಮಾನು ಸರಂಜಾಮುಗಳಲ್ಲಿ ಬಾಂಬ್ ಇದೆ ಎಂದು ಹೇಳಿದ್ದಕ್ಕಾಗಿ ಕೇಸು ದಾಖಲಾಗಿತ್ತು. ಈ ವರ್ಷದ ಆರಂಭದಿಂದಲೂ, ವಿಮಾನ ನಿಲ್ದಾಣವು ಪ್ರಯಾಣಿಕರಿಂದ ನಕಲಿ ಬಾಂಬ್ ಕರೆಗಳು ಅಥವಾ ಅನಾಮಧೇಯ ಹುಸಿ ಬೆದರಿಕೆಗಳನ್ನು ಪದೇ ಪದೇ ಸ್ವೀಕರಿಸುತ್ತಿದೆ. ಕಳೆದ ವಾರ ಇಂಡಿಗೋ ವಿಮಾನವನ್ನು ಹೈಜಾಕ್ ಮಾಡುವ ಬೆದರಿಕೆಯೂ ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT