ಸಚಿವ ಎಂಬಿ ಪಾಟೀಲ್ ಅವರೊಂದಿಗೆ ಮುತ್ತಯ್ಯ ಮುರಳೀಧರನ್ 
ರಾಜ್ಯ

ಕರ್ನಾಟಕದಲ್ಲಿ ಮುತ್ತಯ್ಯ ಮುರಳೀಧರನ್ ರಿಂದ ರೂ. 1,400 ಕೋಟಿ ಹೂಡಿಕೆ!

ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ರೂ. 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮಂಗಳವಾರ ತಿಳಿಸಿದರು.

ಬೆಂಗಳೂರು: ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ರೂ. 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮಂಗಳವಾರ ತಿಳಿಸಿದರು.

ಮುತ್ತಯ್ಯ ಮುರಳೀಧರನ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಮುರಳೀಧರನ್ ಅವರು, ಮುತ್ತಯ್ಯ 'ಬ್ರಿವರೇಜಸ್ ಮತ್ತು ಕನ್ಫಕ್ಷನರೀಸ್' ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ಯಮ ಆರಂಭಿಸಿದ್ದು, ಆರಂಭದಲ್ಲಿ 230 ಕೋಟಿ ರೂ. ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಇದೀಗ ಅದು ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ರೂ. ಆಗಲಿದೆ ಎಂದು ಅವರು ವಿವರಿಸಿದರು.

ಯೋಜನೆಗಾಗಿ ಈಗಾಗಲೇ 46 ಎಕರೆ ಭೂಮಿ ನೀಡಲಾಗಿದ್ದು, ಮುಂದಿನ ವರ್ಷದ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT