ಸಚಿವ ಎಂಬಿ ಪಾಟೀಲ್ ಅವರೊಂದಿಗೆ ಮುತ್ತಯ್ಯ ಮುರಳೀಧರನ್ 
ರಾಜ್ಯ

ಕರ್ನಾಟಕದಲ್ಲಿ ಮುತ್ತಯ್ಯ ಮುರಳೀಧರನ್ ರಿಂದ ರೂ. 1,400 ಕೋಟಿ ಹೂಡಿಕೆ!

ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ರೂ. 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮಂಗಳವಾರ ತಿಳಿಸಿದರು.

ಬೆಂಗಳೂರು: ಶ್ರೀಲಂಕಾದ ಮಾಜಿ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ತಂಪು ಪಾನೀಯ ಮತ್ತು ಸಿಹಿ ತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತ ಹಂತವಾಗಿ ಒಟ್ಟು ರೂ. 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮಂಗಳವಾರ ತಿಳಿಸಿದರು.

ಮುತ್ತಯ್ಯ ಮುರಳೀಧರನ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಮುರಳೀಧರನ್ ಅವರು, ಮುತ್ತಯ್ಯ 'ಬ್ರಿವರೇಜಸ್ ಮತ್ತು ಕನ್ಫಕ್ಷನರೀಸ್' ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ಯಮ ಆರಂಭಿಸಿದ್ದು, ಆರಂಭದಲ್ಲಿ 230 ಕೋಟಿ ರೂ. ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಇದೀಗ ಅದು ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ರೂ. ಆಗಲಿದೆ ಎಂದು ಅವರು ವಿವರಿಸಿದರು.

ಯೋಜನೆಗಾಗಿ ಈಗಾಗಲೇ 46 ಎಕರೆ ಭೂಮಿ ನೀಡಲಾಗಿದ್ದು, ಮುಂದಿನ ವರ್ಷದ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?