ರಾಜ್ಯ

ಪತ್ನಿಯನ್ನು ಗುಂಡಿಟ್ಟು ಕೊಂದು ವ್ಯಕ್ತಿ ತಾನೂ ಆತ್ಮಹತ್ಯೆಗೆ ಶರಣು!

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಕೌಟುಂಬಿಕ ಕಲಹವಾದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಗುಂಡಿತ್ತು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೊಡ್ಡಮಲಸವಾರದಲ್ಲಿ ನಡೆದಿದೆ.

ಹಾಸನ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೋರ್ವ ಕೌಟುಂಬಿಕ ಕಲಹವಾದ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ಗುಂಡಿತ್ತು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನ ದೊಡ್ಡಮಲಸವಾರದಲ್ಲಿ ನಡೆದಿದೆ.

ಜಾಜಿ (45) ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಪೊಲೀಸರ ಮಾಹಿತಿಯ ಪ್ರಕಾರ, ಹರೀಶ್ ಪೂಜಾರಿ (50) ಎಂದು ಗುರುತಿಸಲಾದ ವ್ಯಕ್ತಿ ತನ್ನ ಹೆಂಡತಿಯೊಂದಿಗೆ ಜಗಳ ತೆಗೆದು ಒಂದು ಗಂಟೆಗೂ ಹೆಚ್ಚು ಕಾಲ ಮಾತಿನ ಚಕಮಕಿ ನಡೆಸಿದ ನಂತರ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ.

ಆರೋಪಿ ಹರೀಶ್ ಪೂಜಾರಿ ಕೂಲಿ ಕಾರ್ಮಿಕನಾಗಿದ್ದು, ತನ್ನ ಪತ್ನಿಯೊಂದಿಗೆ ನಿತ್ಯ ಜಗಳ ಮಾಡುತ್ತಿದ್ದು, ಹಲವು ಬಾರಿ ಅಕ್ಕಪಕ್ಕದ ಮನೆಯವರು ಸಮಾಧಾನಪಡಿಸಲು ಯತ್ನಿಸಿದ್ದರು. ಇವರಿಬ್ಬರಿಗೆ ವಸತಿ ಶಾಲೆಗಳಲ್ಲಿ ಓದುತ್ತಿರುವ ಮೂವರು ಮಕ್ಕಳಿದ್ದಾರೆ. ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT