ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಕಾಡಾನೆ ಸಾವು 
ರಾಜ್ಯ

ಮಡಿಕೇರಿ: ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಕಾಡಾನೆ ಸಾವು

ನಿರ್ಮಾಣ ಹಂತದಲ್ಲಿರುವ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಪಲಂಗಾಲ ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಮಡಿಕೇರಿ: ನಿರ್ಮಾಣ ಹಂತದಲ್ಲಿರುವ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಪಲಂಗಾಲ ಗ್ರಾಮದಲ್ಲಿ ಘಟನೆ ವರದಿಯಾಗಿದೆ.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದ ಖಾಸಗಿ ಜಮೀನಿನಲ್ಲಿ ಬಾವಿ ತೋಡಲಾಗುತ್ತಿತ್ತು. 32 ಅಡಿಗೂ ಹೆಚ್ಚು ಆಳ ತೋಡಲಾಗಿದ್ದ ಬಾವಿಯೊಳಗೆ ಸುಮಾರು 12 ರಿಂಗ್‌ಗಳನ್ನು ಹಾಕಲಾಗಿದ್ದು, ಅದನ್ನು ಮುಚ್ಚಿರಲಿಲ್ಲ. ಆದರೆ, ಸೋಮವಾರ ಮಧ್ಯರಾತ್ರಿ ಮೇವು ಅರಸಿ ಗ್ರಾಮಕ್ಕೆ ನುಗ್ಗಿದ ಕಾಡಾನೆ ಆಕಸ್ಮಿಕವಾಗಿ ಈ ಬಾವಿಗೆ ಬಿದ್ದಿದೆ. ತಕ್ಷಣ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಆರ್‌ಎಫ್‌ಒ ಕಳ್ಳೀರ ದೇವಯ್ಯ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಆನೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಆದರೆ ರಾತ್ರಿ ವೇಳೆ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬೆಳಗಿನ ಜಾವ ಆನೆ ಸಾವನ್ನಪ್ಪಿದೆ.

ಮೃತಪಟ್ಟ ಆನೆ 18ರಿಂದ 20 ವರ್ಷದೊಳಗಿನ ಗಂಡು ಆನೆ ಎಂದು ಮೂಲಗಳು ಖಚಿತಪಡಿಸಿವೆ. ಇದೇ ಆನೆ ಇತ್ತೀಚೆಗೆ ಗ್ರಾಮ ವ್ಯಾಪ್ತಿಯಲ್ಲಿ ವಾಹನಕ್ಕೆ ಹಾನಿ ಮಾಡಿತ್ತು. ಆದರೆ, ಆನೆ ಸಾವನ್ನಪ್ಪಿದ್ದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ವಿರಾಜಪೇಟೆ ಡಿಸಿಎಫ್ ಜಗನ್ನಾಥ್ ಅವರು ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆಗಳ ಸಂಘರ್ಷವನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

''ಏನೇ ಕ್ರಮ ಕೈಗೊಂಡರೂ ಆನೆಗಳು ಗ್ರಾಮಗಳಿಗೆ ನುಗ್ಗುತ್ತಿವೆ. ಇದು ಗುಡ್ಡಗಾಡು ಪ್ರದೇಶವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಯಿತು” ಎಂದು ಜಗನ್ನಾಥ್ ಅವರು ಹೇಳಿದರು.

ಅರಣ್ಯಾಧಿಕಾರಿಗಳು ಆನೆಯನ್ನು ಬಾವಿಯಿಂದ ಮೇಲೆತ್ತಲು ಸಾಧ್ಯವಾಗದ ಕಾರಣ, ತೆರೆದ ಬಾವಿಗೆ ಮಣ್ಣು ತುಂಬಿ ಅಲ್ಲಿಯೇ ಆನೆಯನ್ನು ಮಣ್ಣು ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT