ಪವಿತ್ರಾ ಗೌಡ, ದರ್ಶನ್, ಮತ್ತು ಕೊಲೆಯಾದ ರೇಣುಕಾಸ್ವಾಮಿ(ಸಂಗ್ರಹ ಚಿತ್ರ) 
ರಾಜ್ಯ

ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ; ಕೇಸಿನಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಡಾ ಜಿ ಪರಮೇಶ್ವರ್

ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ನಟ ದರ್ಶನ್ ತೂಗುದೀಪ ಸಹಚರರಿಂದ ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಲು ನಿನ್ನೆ ತೆರಳಬೇಕಿತ್ತು. ಆದರೆ, ಬಕ್ರೀದ್ ಹಬ್ಬ ಇದ್ದರಿಂದ ಹೋಗಲು ಸಾಧ್ಯವಾಗಿಲ್ಲ. ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿ ಬರುತ್ತೇನೆ ಎಂದರು.

ರೇಣುಕಾಸ್ವಾಮಿ ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ನೀಡುವ ಬಗ್ಗೆ, ತನಿಖೆ ನಡೆದ ಬಳಿಕ ಆರ್ಥಿಕ ನೆರವು ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರದಿಂದ ನೆರವು ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದರು.

ಸಂಬಂಧಪಟ್ಟವರನ್ನು ತನಿಖೆ ಮಾಡಲಾಗುವುದು: ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣಗೆ ನೋಟಿಸ್‌ ನೀಡಿರುವ ಬಗ್ಗೆ, ಸಿನಿಮಾ ನಟರು ಆಗಿರೋದ್ರಿಂದ ಕಲಾವಿದರು ಸಂಪರ್ಕದಲ್ಲಿರುವುದು ಸಹಜ. ಸಾಕ್ಷ್ಯಾಧಾರಗಳ ಮೇಲೆ ತನಿಖೆ ಮುಂದುವರೆಯುತ್ತದೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ತನಿಖೆ ಮಾಡಲಾಗುವುದು ಎಂದರು. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದ್ದು, ದರ್ಶನ್ ಸೇರಿದಂತೆ 19 ಜನರು ಬಂಧನದಲ್ಲಿದ್ದಾರೆ.

ಪೆಟ್ರೋಲ್ ದರ ಏರಿಕೆ ಪ್ರತಿಭಟನೆ ಎದುರಿಸುತ್ತೇವೆ: ಪಿಎಸ್ ಐ ನೇಮಕಾತಿ ಅಂತಿಮ ಹಂತದಲ್ಲಿದೆ. ಟೆಕ್ಷಿಕಲ್ ಪ್ರಶ್ನೆಗಳನ್ನ ತೆಗೆದಿದ್ದಾರೆ. ಈ ವಾರ ಅಥವಾ ಮುಂದಿನ ವಾರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ಬಗ್ಗೆ, ಪ್ರತಿಭಟನೆ ಮಾಡೋದು ಅವರ ಹಕ್ಕು. ಬಿಜೆಪಿಯವರು ಪ್ರತಿಯೊಂದರಲ್ಲೂ ರಾಜಕಾರಣ ಮಾಡ್ತಾರೆ. 14 ಬಾರಿ ಪೆಟ್ರೋಲ್ ಬೆಲೆ ಏರಿಕೆ ಮಾಡಿದ್ದಾರೆ. ಕಚ್ಚಾತೈಲ ಬ್ಯಾರಲ್ ಕಡಿಮೆ ಇದ್ದರೂ ಜಾಸ್ತಿ ಮಾಡಿದರು. ಅದನ್ನು ಬಿಜೆಪಿಯವರು ನೆನಪಿಟ್ಟುಕೊಳ್ಳಲಿ. ಅವರ ಪ್ರತಿಭಟನೆ ಮಾಡಲಿ ನಾವು ಎದುರಿಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT