ದೂರು ದಾಖಲಿಸಿದ ನಟ ಪ್ರಥಮ್. 
ರಾಜ್ಯ

ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

ಬಿಗ್‌ ಬಾಸ್‌ ಖ್ಯಾತಿಯ, ನಟ ಪ್ರಥಮ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಬಿಗ್‌ ಬಾಸ್‌ ಖ್ಯಾತಿಯ, ನಟ ಪ್ರಥಮ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಥಮ್ ದೂರು ದಾಖಲಿಸಿರುವ ಅವರು, ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜೀವನ ಬಹಳ ದೊಡ್ಡದು;ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ. ನೀವು ಅತಿಯಾಗಿ ನಮ್ಮ ʼಕರ್ನಾಟಕದ ಆಳಿಯʼ ತಂಡದ ಆಫೀಸ್‌ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ. ಇನ್ಮೇಲೆ ನನಗೆ ಬರುವ ಕಾಲ್ ಮೆಸೇಜ್‌ ಅಥವಾ ಸೋಶಿಯಲ್‌ ಮೀಡಿಯಾ ವಾರ್ನಿಂಗ್ ಎಲ್ಲವೂ ಪೋಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು. ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ; ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ ಕನ್ನಡಕ್ಕಾಗಿ, ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ ಯಾರಿಗೋಸ್ಕರವೋ ಲೈಫ್ ಹಾಳುಮಾಡಿಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.

ಪ್ರಥಮ್‌ ಇತ್ತೀಚೆಗೆ ರೇಣುಕಾಸ್ವಾಮಿ ಪ್ರಕರಣ ಸಂಬಂಧ ಮಾತನಾಡಿದ್ದರು. ಇದು ದರ್ಶನ್‌ ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಪ್ರಥಮ್‌ ಅವರಿಗೆ ದರ್ಶನ್‌ ಅಭಿಮಾನಿಗಳಿಂದ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!