ಸಂಗ್ರಹ ಚಿತ್ರ 
ರಾಜ್ಯ

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದು!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಈ ಸಮಿತಿಯ ಪದಾಧಿಕಾರಿಗಳು ಕಚೇರಿ ಸ್ಥಾಪನೆ, ವೇತನ ಮತ್ತು ಕಾರು ಸೇರಿದಂತೆ ಇತರೆ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಿಯಮಗಳನ್ನು ನಿಗದಿಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಸಮಿತಿಯ ಪದಾಧಿಕಾರಿಗಳಿಗೆ ಬೆಂಗಳೂರಿನಲ್ಲಿ ಕಚೇರಿಯ ಜೊತೆಗೆ ಅಧಿಕೃತ ಕಾರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡುವ ಭರವಸೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಇದರಂತೆ ಸಮಿತಿಯ ನಾಲ್ವರು ಉಪಾಧ್ಯಕ್ಷರಿಗೂ ಕಚೇರಿ ಸಿಗಲಿದೆ. ಜಿಲ್ಲಾ ಮಟ್ಟದಲ್ಲಿ ಕಚೇರಿಗಳನ್ನು ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಮತ ಹಂಚಿಕೆ ಶೇಕಡಾ 32 ರಿಂದ 2024 ರಲ್ಲಿ ಶೇಕಡಾ 45 ಕ್ಕೆ ಏರಿದ್ದು, ಪಕ್ಷವು ಒಂದು ಸ್ಥಾನದಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳು ಪರೋಕ್ಷ ಕಾರಣವಾಗಿದೆ ಎಂದು ಹೇಳಿದ್ದರು.

ಸಮಿತಿಗೆ ಯಾವುದೇ ನಿಮಯಗಳು ಮತ್ತು ಉಲ್ಲೇಖಗಳು ಇರಲಿಲ್ಲ. ಮಹಿಳೆಯರು, ಅಲ್ಪಸಂಖ್ಯಾತರು ಸೇರಿದಂತೆ ನಿರ್ಗತಿಕರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಿಎಂ ಬದ್ಧರಾಗಿದ್ದಾರೆ ಎಂದು ರೇವಣ್ಣ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT