ಸಂಗ್ರಹ ಚಿತ್ರ 
ರಾಜ್ಯ

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಗೆ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದು!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಬದ್ಧ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯೋಜನೆಗಳಿಗಾಗಿ ವಾರ್ಷಿಕ 60 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದು, ಇದೀಗ ಯೋಜನೆ ಅನುಷ್ಠಾನಗೊಳಿಸುತ್ತಿರುವ ಸಮಿತಿಗೆ ಸೌಲಭ್ಯಗಳ ಕಲ್ಪಿಸಲು ಮುಂದಾಗಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಈ ಸಮಿತಿಯ ಪದಾಧಿಕಾರಿಗಳು ಕಚೇರಿ ಸ್ಥಾಪನೆ, ವೇತನ ಮತ್ತು ಕಾರು ಸೇರಿದಂತೆ ಇತರೆ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಿಯಮಗಳನ್ನು ನಿಗದಿಪಡಿಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಸಮಿತಿಯ ಪದಾಧಿಕಾರಿಗಳಿಗೆ ಬೆಂಗಳೂರಿನಲ್ಲಿ ಕಚೇರಿಯ ಜೊತೆಗೆ ಅಧಿಕೃತ ಕಾರು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡುವ ಭರವಸೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ಇದರಂತೆ ಸಮಿತಿಯ ನಾಲ್ವರು ಉಪಾಧ್ಯಕ್ಷರಿಗೂ ಕಚೇರಿ ಸಿಗಲಿದೆ. ಜಿಲ್ಲಾ ಮಟ್ಟದಲ್ಲಿ ಕಚೇರಿಗಳನ್ನು ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು, 2019 ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಮತ ಹಂಚಿಕೆ ಶೇಕಡಾ 32 ರಿಂದ 2024 ರಲ್ಲಿ ಶೇಕಡಾ 45 ಕ್ಕೆ ಏರಿದ್ದು, ಪಕ್ಷವು ಒಂದು ಸ್ಥಾನದಿಂದ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳು ಪರೋಕ್ಷ ಕಾರಣವಾಗಿದೆ ಎಂದು ಹೇಳಿದ್ದರು.

ಸಮಿತಿಗೆ ಯಾವುದೇ ನಿಮಯಗಳು ಮತ್ತು ಉಲ್ಲೇಖಗಳು ಇರಲಿಲ್ಲ. ಮಹಿಳೆಯರು, ಅಲ್ಪಸಂಖ್ಯಾತರು ಸೇರಿದಂತೆ ನಿರ್ಗತಿಕರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಿಎಂ ಬದ್ಧರಾಗಿದ್ದಾರೆ ಎಂದು ರೇವಣ್ಣ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 469ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!