ಡಿಕೆ ಶಿವಕುಮಾರ್ 
ರಾಜ್ಯ

ಡಿಕೆ ಶಿವಕುಮಾರ್: ಸಾಹಿತಿಗಳೂ ರಾಜಕಾರಣಿಗಳೇ, ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ್ದರಲ್ಲಿ ತಪ್ಪೇನಿದೆ?

ಸಾಹಿತಿಗಳೂ ರಾಜಕಾರಣಿಗಳೇ ಆಗಿದ್ದಾರೆ. ನಾನೇ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಸಭೆಗೆ ಕರೆದಿದ್ದೆ. ಅದರಲ್ಲಿ ಏನು ತಪ್ಪಿದೆ?. ಅವರು ರಾಜಕೀಯಕ್ಕೆ ಪ್ರವೇಶಿಸಬಹುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ ಅಕಾಡೆಮಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯನ್ನು ಸಮರ್ಥಿಸಿಕೊಂಡರು.

ಬೆಂಗಳೂರು: ಸಾಹಿತಿಗಳೂ ರಾಜಕಾರಣಿಗಳೇ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ವಿವಿಧ ಅಕಾಡೆಮಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯನ್ನು ಸಮರ್ಥಿಸಿಕೊಂಡರು.

ಕೆಲ ದಿನಗಳ ಹಿಂದೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಮತ್ತು ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡ ವಿಚಾರವಾಗಿ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಅವರು ತಮ್ಮ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

‘ಅಕಾಡೆಮಿ ಅಧ್ಯಕ್ಷರ ಸಭೆ ನಾನೇ ಕರೆದಿದ್ದು. ಅದರಲ್ಲಿ ತಪ್ಪೇನಿದೆ. ಪಕ್ಷದ ಕಚೇರಿಯಲ್ಲಿ ಸಭೆ ಕರೆದಿದ್ದು ಸರಿಯಲ್ಲ ಅಂತ ನಿಮಗೆ ಅನ್ನಿಸಿರಬಹುದು. ಇದು ಸರ್ಕಾರದ ನೇಮಕ. ಹೀಗಾಗಿ ಎಲ್ಲಿ ಬೇಕಾದರೂ ಕರೆಸಿಕೊಳ್ಳಬಹುದು. ಎಲ್ಲಿ ಬೇಕಾದರೂ ಸಭೆ ಮಾಡಬಹುದು. ಅವರು (ಸಾಹಿತಿ–ಕಲಾವಿದರು) ರಾಜಕಾರಣಿಗಳೇ ಆಗಿದ್ದಾರೆ ಮತ್ತು ಅವರು ರಾಜಕೀಯಕ್ಕೆ ಪ್ರವೇಶಿಸಬಾರದು ಅನ್ನುವುದೇನಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್ ಕಚೇರಿಯೊಳಗೆ ಸಾಹಿತ್ಯ, ಸಂಸ್ಕೃತಿ ಮತ್ತು ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿ ಸಭೆ ನಡೆಸಿದ್ದನ್ನು ಬಿಜೆಪಿ ಆಕ್ಷೇಪಿಸಿತ್ತು.

ಅಕಾಡೆಮಿಗಳು ಸ್ವತಂತ್ರ ಸಂಸ್ಥೆಗಳಲ್ಲ. ಎಲ್ಲರೂ ರಾಜಕಾರಣಿಗಳು. ತಮ್ಮದೇ ಆದ ಸಿದ್ಧಾಂತಗಳನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ. ಅವರು ಅದರ ಬಗ್ಗೆ ಮಾತನಾಡದೇ ಇರಬಹುದು. ನಾನು ಅವರನ್ನು (ಸಭೆಗೆ) ಕರೆದಾಗ, ಸಿದ್ಧರಿದ್ದವರು ಬಂದರು, ಕೆಲವರು ಬರಲಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

SCROLL FOR NEXT